11:49 AM Monday20 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17 ಕಡೆ ರೈಡ್

20/04/2026, 11:48

ಬೆಂಗಳೂರು(reporterkarnataka.com): ಸಿಲಿಕಾನ್ ಸಿಟಿಯಲ್ಲಿ ಇಂದು ಜಾರಿ ನಿರ್ದೇಶನಾಲಯ (ED) ಭಾರಿ ಕಾರ್ಯಾಚರಣೆ ನಡೆಸಿದೆ. ಶಾಂತಿನಗರ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರ, ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರಿಗೆ ಇಡಿ ಅಧಿಕಾರಿಗಳು ಬಿಗಿ ಸಂಕಷ್ಟ ತಂದೊಡ್ಡಿದ್ದಾರೆ.
ಬೆಂಗಳೂರಿನ ಒಟ್ಟು 17 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಜಾಲಾಡುತ್ತಿದ್ದಾರೆ.


*17 ಕಡೆ ಏಕಕಾಲಕ್ಕೆ ದಾಳಿ:* ಅಶೋಕ್ ನಗರದಲ್ಲಿರುವ ನಲಪಾಡ್ ನಿವಾಸ ಸೇರಿದಂತೆ ಬೆಂಗಳೂರಿನ ಹಲವೆಡೆ ಬೆಳಿಗ್ಗೆ 6 ಗಂಟೆಯಿಂದಲೇ ಶೋಧ ಕಾರ್ಯ ಆರಂಭವಾಗಿದೆ.
ಸುಮಾರು 12 ಮಂದಿ ಅಧಿಕಾರಿಗಳ ತಂಡ ರೈಡ್ ನಡೆಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಆರ್‌ಪಿಎಫ್ ಸಿಬ್ಬಂದಿಯಿಂದ ಭಾರಿ ಭದ್ರತೆ ಒದಗಿಸಲಾಗಿದೆ.

*ಬಿಟ್ ಕಾಯಿನ್ ದಂಧೆ ನಂಟು?:*
ಹ್ಯಾಕರ್ ಶ್ರೀಕಿ ಜೊತೆ ನಲಪಾಡ್ ಆರ್ಥಿಕ ವ್ಯವಹಾರ ಹೊಂದಿದ್ದರು ಎಂಬ ಆರೋಪ ಕೇಳಿಬಂದಿದೆ. ಸುಮಾರು 6 ವರ್ಷಗಳ ಕಾಲ ಶ್ರೀಕಿ ಜೊತೆ ಸಂಪರ್ಕದಲ್ಲಿದ್ದ ನಲಪಾಡ್, ಅಂದಾಜು 4.5 ಕೋಟಿ ರೂ. ವಹಿವಾಟು ನಡೆಸಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ಬಿಟ್ ಕಾಯಿನ್ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಇಡಿ ಅಧಿಕಾರಿಗಳು, ಹಣ ವರ್ಗಾವಣೆ ಆಯಾಮದಲ್ಲಿ ಈ ರೈಡ್ ಕೈಗೊಂಡಿದ್ದಾರೆ. ಹ್ಯಾರಿಸ್ ಹಾಗೂ ನಲಪಾಡ್ ಅವರ ಆರ್ಥಿಕ ವ್ಯವಹಾರಗಳ ದಾಖಲೆಗಳು ಬ್ಯಾಂಕ್ ಖಾತೆಗಳು ಮತ್ತು ಬಿಟ್ ಕಾಯಿನ್ ಹಗರಣದ ಆರೋಪಿಗಳೊಂದಿಗೆ ಇರುವ ಲಿಂಕ್ ಬಗ್ಗೆ ಅಧಿಕಾರಿಗಳು ಪ್ರಶ್ನಿಸುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು