12:40 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಇದೇನು ಕೊರೊನಾ ಮೆರವಣಿಗೆಯೇ ?: ಸರಕಾರದ ಗೈಡ್ ಲೈನ್ಸ್ ಸಚಿವ ಲಿಂಬಾವಳಿ, ಶಾಸಕ ಸುನಿಲ್ ಗೆ ಅನ್ವಯಿಸುವುದಿಲ್ಲವೇ?

11/07/2021, 18:58

ಕಾರ್ಕಳ(reporterkarnataka news): ಒಂದು ಕಡೆ ಕೊರೊನಾ ಎರಡನೇ ಅಲೆಯ ಅರ್ಭಟ ಇನ್ನೂ ತಗ್ಗಿಲ್ಲ. ಇನ್ನೊಂದು ಕಡೆ ಮೂರನೇ ಅಲೆಯ ಭೀತಿ ಶುರುವಾಗಿದೆ. ಇವೆಲ್ಲದರ ನಡುವೆ ರಾಜಕೀಯ ಮೇಲಾಟ ಶುರುವಾಗಿದೆ. ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಎರಡೂ ಕೂಡ ಅಲ್ಲಲ್ಲಿ ಸಭೆ- ಸಮಾರಂಭ ಆಯೋಜಿಸುತ್ತಿವೆ. ಜನರು ಕೂಡ ಯಾವುದೇ ಭಯವಿಲ್ಲದೆ ಹುಚ್ಚೆದ್ದು ಸೇರುತ್ತಿದ್ದಾರೆ. ಇದಕ್ಕೊಂದು ಸಾಕ್ಷಿ ಕಾರ್ಕಳದ ಬಲ್ಲಿರಿ ಗ್ರಾಮದಲ್ಲಿ ನಡೆದ ಸಮಾರಂಭ.

ಮೊನ್ನೆ ಮೊನ್ನೆ ಮಂಗಳೂರು, ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ – ಸಂವಾದ ನಡೆಯಿತು. ಇಂದು ಮಂಗಳೂರು ರೈಲು ನಿಲ್ದಾಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮುಂದಾಳತ್ವದಲ್ಲಿ ಗಾಜಿನ ಛಾವಣಿಯ ರೈಲಿಗೆ ಹಸಿರು ನಿಶಾನೆ ತೋರಿಸುವ ಕಾರ್ಯಕ್ರಮ ನಡೆಯಿತು. ಎಲ್ಲೂ ಸಾಮಾಜಿಕ ಅಂತರವಿರಲಿಲ್ಲ.


ಇದರ ಜತೆಗೆ ಕಾರ್ಕಳದ ನಲ್ಲೂರು ಗ್ರಾಮದಲ್ಲಿ ಅರಣ್ಯ ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಭಾರಿ ಗೌಜಿ ಗಮತ್ತಿನ ಮೆರವಣಿಗೆ ನಡೆಯಿತು. ಪದ್ಮಶ್ರೀ ಸಾಲುಮರ ತಿಕ್ಕಮ್ಮ ವೃಕ್ಚ್ಯೋದ್ಯಾನಕ್ಕೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮ ಇದಾಗಿತ್ತು. ಕೇರಳ ಶೈಲಿಯ ಚೆಂಡೆ, ಗೊಂಬೆ ಕುಣಿತದೊಂದಿಗೆ ಶಿಲಾನ್ಯಾಸ ನಡೆಯುವ ಸ್ಥಳಕ್ಕೆ ಸಚಿವ ಲಿಂಬಾವಳಿ ಅವರನ್ನು ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ಕಾರ್ಕಳ ಶಾಸಕ ಸುನಿಲ್ ಕುಮಾರ್ ಮುಂತಾದ ಗಣ್ಯರು ಕೂಡ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಹೆಚ್ಚಿನವರ ಬಾಯಿಯಲ್ಲಿ ಮಾಸ್ಕ್ ಇರುವುದು ಬಿಟ್ಟರೆ ಸಾಮಾಜಿಕ ಅಂತರ ಎಲ್ಲೂ ಇರಲಿಲ್ಲ. ಸಚಿವರು, ಶಾಸಕರು, ಸಾರ್ವಜನಿಕರು ಹೆಗಲಿಗೆ ಹೆಗಲು ತಾಗಿಸಿಕೊಂಡಿಯೇ ಮೆರವಣಿಗೆಯಲ್ಲಿ ಸಾಗಿದರು. ರಾಜ್ಯ ಸರಕಾರದ ಗೈಡ್ಸ್ ಲೈನ್ ಪಾಲನೆ

ಸಚಿವ, ಶಾಸಕರಿಗೆ ಬೇಕಾಗಿಲ್ಲ. ಇವರಿಗೆ ಕೊರೊನಾದ ಭಯವಿಲ್ಲ. ಯಾಕೆಂದರೆ ಇವರದೆಲ್ಲ ಎರಡು ಡೋಸ್ ಲಸಿಕೆಯಾಗಿದೆ. ಇಮ್ಯುನಿಟಿ ಬೂಸ್ಟರ್ ಸೇವಿಸುತ್ತಾರೆ. ಅಗತ್ಯ ಬಿದ್ದರೆ ಆಕ್ಸಿಜನ್ ಸಿಲಿಂಡರ್ ಮನೆ ಬಾಗಿಲಿಗೆ ಬರುತ್ತದೆ.

ಆದರೆ ಬಡಪಾಯಿಗಳ ಗತಿ ಏನು? ನಾವೇ ಚಿಂತಿಸಿ, ಉತ್ತರ ಕಂಡುಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು