5:47 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅನನ್ಯ ಸೇವೆ: ಡಾ. ನಾಗರತ್ನ ಕೆ. ಎ. ಅವರಿಗೆ ಔಟ್ ಸ್ಟ್ಯಾಂಡಿಂಗ್ ವಿಮೆನ್ ಅವಾರ್ಡ್ ಪ್ರದಾನ

21/07/2024, 21:03

ಮಂಗಳೂರು(reporterkarnataka.com): ವಿಸ್ಡಮ್ ಇನ್ಸ್ಟಿಟ್ಯೂಷನ್ ವತಿಯಿಂದ ನಗರದ ಹೋಟೆಲ್ ಒಶಿಯನ್ ಪರ್ಲ್ ನಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ 60 ಪುರಸ್ಕೃತರ ಪೈಕಿ ಔಟ್ ಸ್ಟ್ಯಾಂಡಿಂಗ್ ವಿಮೆನ್ ವಿಭಾಗದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ, ವಿವಿ ಕಾಲೇಜಿನ ಪ್ರಾಣಿ ಶಾಸ್ತ್ರ ಉಪನ್ಯಾಸಕಿ ಡಾ. ನಾಗರತ್ನ ಕೆ.ಎ. ಅವರಿಗೆ ಶಿಕ್ಷಣ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಔಟ್ ಸ್ಟ್ಯಾಂಡಿಂಗ್ ವಿಮೆನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಲೈಫ್ ಟೈಮ್ ಅಚೀವ್ ಮೆಂಟ್ ಅವಾರ್ಡ್, ಔಟ್ ಸ್ಟ್ಯಾಂಡಿಂಗ್ ಅಡ್ಮಿನಿಸ್ಟೇಟರ್ ಅವಾರ್ಡ್, ಔಟ್ ಸ್ಟ್ಯಾಂಡಿಂಗ್ ವಿಮೆನ್, ಸೋಶಿಯಲ್ ಇಂಪಾಕ್ಟ್ ಪರ್ಸನಾಲಿಟಿ, ಡೈನಾಮಿಕ್ ಅವಾರ್ಡ್ ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.
ಈ ಸಂದರ್ಭದಲ್ಲಿ ಮಣಿಪಾಲ ಎಂಐಟಿ ಸಂಸ್ಥೆಯ ಅಸೋಸಿಯೇಟ್ ಪ್ರೊ. ಡಾ.ದಶರಥರಾಜ್ ಕೆ. ಶೆಟ್ಟಿ, ಮಾತನಾಡಿ, ಇದೊಂದು ಸಾಧಕರನ್ನು ಗುರುತಿಸುವ ಒಳೆಯ ಕಾರ್ಯಕ್ರಮವಾಗಿದೆ. ನಾವು ಒಳ್ಳೆಯ ಗುರುಗಳನ್ನು ಪಡೆದ್ದರಿಂದ ನಾವು ಕೂಡ ಒಳ್ಳೆಯ ಪೋಸಿಶನ್ ತಲುಪಿದ್ದೇವೆ. ಇಂತಹ ಕಾರ್ಯಗಳು ಇನ್ನಷ್ಟು ಆಗಬೇಕಿದೆ. ಮುಂದಿನ ಪೀಳಿಗೆಗಳಿಗೆ ಗುರುಗಳ ಮಹತ್ವ ಅರಿಯಬೇಕಾಗಿದೆ ಎಂದು ಹೇಳಿದರು.


ಮಂಗಳೂರು ಐಸಿಎಐ ಬ್ರಾಂಚ್ ಚೇರ್ಮನ್ ಸಿ. ಎ. ಗೌತಮ್ ಪೈ ಡಿ., ಸುರತ್ಕಲ್ ಎನ್ ಐಟಿಕೆ ಎಫ್ ಆರ್.ಎಸ್.ಸಿ ಪ್ರೊಫೆಸರ್ ಡಾ. ಅರುಣ್ ಇಸ್ಲೊರ್ , ತ್ರಿಷಾ ಶಿಕ್ಷಣ ಸಂಸ್ಥೆಯ ಫೌಂಡರ್ ಸಿ. ಎ. ಗೋಪಾಲಕೃಷ್ಣ ಭಟ್ ವಿಸ್ಡಮ್ ಇನ್ಸ್ಟಿಟ್ಯೂಟ್ ಮ್ಯಾನೇಜಿಂಗ್ ಡೈರೆಕ್ಟ ರ್ ಡಾ. ಫ್ರಾನ್ಸಿಕ ತೇಜ್, ವಿಸ್ಡಮ್ ಇನ್ಸ್ಟಿಟ್ಯೂಟ್ ಸಿಇಓ ಡಾ. ಗುರುತೇಜ್ ಅಭಿಷೇಕ್ ಕ್ಷತ್ರಿಯ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು