2:59 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅನನ್ಯ ಸೇವೆ: ಡಾ. ನಾಗರತ್ನ ಕೆ. ಎ. ಅವರಿಗೆ ಔಟ್ ಸ್ಟ್ಯಾಂಡಿಂಗ್ ವಿಮೆನ್ ಅವಾರ್ಡ್ ಪ್ರದಾನ

21/07/2024, 21:03

ಮಂಗಳೂರು(reporterkarnataka.com): ವಿಸ್ಡಮ್ ಇನ್ಸ್ಟಿಟ್ಯೂಷನ್ ವತಿಯಿಂದ ನಗರದ ಹೋಟೆಲ್ ಒಶಿಯನ್ ಪರ್ಲ್ ನಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ 60 ಪುರಸ್ಕೃತರ ಪೈಕಿ ಔಟ್ ಸ್ಟ್ಯಾಂಡಿಂಗ್ ವಿಮೆನ್ ವಿಭಾಗದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ, ವಿವಿ ಕಾಲೇಜಿನ ಪ್ರಾಣಿ ಶಾಸ್ತ್ರ ಉಪನ್ಯಾಸಕಿ ಡಾ. ನಾಗರತ್ನ ಕೆ.ಎ. ಅವರಿಗೆ ಶಿಕ್ಷಣ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಔಟ್ ಸ್ಟ್ಯಾಂಡಿಂಗ್ ವಿಮೆನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಲೈಫ್ ಟೈಮ್ ಅಚೀವ್ ಮೆಂಟ್ ಅವಾರ್ಡ್, ಔಟ್ ಸ್ಟ್ಯಾಂಡಿಂಗ್ ಅಡ್ಮಿನಿಸ್ಟೇಟರ್ ಅವಾರ್ಡ್, ಔಟ್ ಸ್ಟ್ಯಾಂಡಿಂಗ್ ವಿಮೆನ್, ಸೋಶಿಯಲ್ ಇಂಪಾಕ್ಟ್ ಪರ್ಸನಾಲಿಟಿ, ಡೈನಾಮಿಕ್ ಅವಾರ್ಡ್ ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.
ಈ ಸಂದರ್ಭದಲ್ಲಿ ಮಣಿಪಾಲ ಎಂಐಟಿ ಸಂಸ್ಥೆಯ ಅಸೋಸಿಯೇಟ್ ಪ್ರೊ. ಡಾ.ದಶರಥರಾಜ್ ಕೆ. ಶೆಟ್ಟಿ, ಮಾತನಾಡಿ, ಇದೊಂದು ಸಾಧಕರನ್ನು ಗುರುತಿಸುವ ಒಳೆಯ ಕಾರ್ಯಕ್ರಮವಾಗಿದೆ. ನಾವು ಒಳ್ಳೆಯ ಗುರುಗಳನ್ನು ಪಡೆದ್ದರಿಂದ ನಾವು ಕೂಡ ಒಳ್ಳೆಯ ಪೋಸಿಶನ್ ತಲುಪಿದ್ದೇವೆ. ಇಂತಹ ಕಾರ್ಯಗಳು ಇನ್ನಷ್ಟು ಆಗಬೇಕಿದೆ. ಮುಂದಿನ ಪೀಳಿಗೆಗಳಿಗೆ ಗುರುಗಳ ಮಹತ್ವ ಅರಿಯಬೇಕಾಗಿದೆ ಎಂದು ಹೇಳಿದರು.


ಮಂಗಳೂರು ಐಸಿಎಐ ಬ್ರಾಂಚ್ ಚೇರ್ಮನ್ ಸಿ. ಎ. ಗೌತಮ್ ಪೈ ಡಿ., ಸುರತ್ಕಲ್ ಎನ್ ಐಟಿಕೆ ಎಫ್ ಆರ್.ಎಸ್.ಸಿ ಪ್ರೊಫೆಸರ್ ಡಾ. ಅರುಣ್ ಇಸ್ಲೊರ್ , ತ್ರಿಷಾ ಶಿಕ್ಷಣ ಸಂಸ್ಥೆಯ ಫೌಂಡರ್ ಸಿ. ಎ. ಗೋಪಾಲಕೃಷ್ಣ ಭಟ್ ವಿಸ್ಡಮ್ ಇನ್ಸ್ಟಿಟ್ಯೂಟ್ ಮ್ಯಾನೇಜಿಂಗ್ ಡೈರೆಕ್ಟ ರ್ ಡಾ. ಫ್ರಾನ್ಸಿಕ ತೇಜ್, ವಿಸ್ಡಮ್ ಇನ್ಸ್ಟಿಟ್ಯೂಟ್ ಸಿಇಓ ಡಾ. ಗುರುತೇಜ್ ಅಭಿಷೇಕ್ ಕ್ಷತ್ರಿಯ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು