5:30 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅನನ್ಯ ಸೇವೆ: ಡಾ. ನಾಗರತ್ನ ಕೆ. ಎ. ಅವರಿಗೆ ಔಟ್ ಸ್ಟ್ಯಾಂಡಿಂಗ್ ವಿಮೆನ್ ಅವಾರ್ಡ್ ಪ್ರದಾನ

21/07/2024, 21:03

ಮಂಗಳೂರು(reporterkarnataka.com): ವಿಸ್ಡಮ್ ಇನ್ಸ್ಟಿಟ್ಯೂಷನ್ ವತಿಯಿಂದ ನಗರದ ಹೋಟೆಲ್ ಒಶಿಯನ್ ಪರ್ಲ್ ನಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ 60 ಪುರಸ್ಕೃತರ ಪೈಕಿ ಔಟ್ ಸ್ಟ್ಯಾಂಡಿಂಗ್ ವಿಮೆನ್ ವಿಭಾಗದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ, ವಿವಿ ಕಾಲೇಜಿನ ಪ್ರಾಣಿ ಶಾಸ್ತ್ರ ಉಪನ್ಯಾಸಕಿ ಡಾ. ನಾಗರತ್ನ ಕೆ.ಎ. ಅವರಿಗೆ ಶಿಕ್ಷಣ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಔಟ್ ಸ್ಟ್ಯಾಂಡಿಂಗ್ ವಿಮೆನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಲೈಫ್ ಟೈಮ್ ಅಚೀವ್ ಮೆಂಟ್ ಅವಾರ್ಡ್, ಔಟ್ ಸ್ಟ್ಯಾಂಡಿಂಗ್ ಅಡ್ಮಿನಿಸ್ಟೇಟರ್ ಅವಾರ್ಡ್, ಔಟ್ ಸ್ಟ್ಯಾಂಡಿಂಗ್ ವಿಮೆನ್, ಸೋಶಿಯಲ್ ಇಂಪಾಕ್ಟ್ ಪರ್ಸನಾಲಿಟಿ, ಡೈನಾಮಿಕ್ ಅವಾರ್ಡ್ ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.
ಈ ಸಂದರ್ಭದಲ್ಲಿ ಮಣಿಪಾಲ ಎಂಐಟಿ ಸಂಸ್ಥೆಯ ಅಸೋಸಿಯೇಟ್ ಪ್ರೊ. ಡಾ.ದಶರಥರಾಜ್ ಕೆ. ಶೆಟ್ಟಿ, ಮಾತನಾಡಿ, ಇದೊಂದು ಸಾಧಕರನ್ನು ಗುರುತಿಸುವ ಒಳೆಯ ಕಾರ್ಯಕ್ರಮವಾಗಿದೆ. ನಾವು ಒಳ್ಳೆಯ ಗುರುಗಳನ್ನು ಪಡೆದ್ದರಿಂದ ನಾವು ಕೂಡ ಒಳ್ಳೆಯ ಪೋಸಿಶನ್ ತಲುಪಿದ್ದೇವೆ. ಇಂತಹ ಕಾರ್ಯಗಳು ಇನ್ನಷ್ಟು ಆಗಬೇಕಿದೆ. ಮುಂದಿನ ಪೀಳಿಗೆಗಳಿಗೆ ಗುರುಗಳ ಮಹತ್ವ ಅರಿಯಬೇಕಾಗಿದೆ ಎಂದು ಹೇಳಿದರು.


ಮಂಗಳೂರು ಐಸಿಎಐ ಬ್ರಾಂಚ್ ಚೇರ್ಮನ್ ಸಿ. ಎ. ಗೌತಮ್ ಪೈ ಡಿ., ಸುರತ್ಕಲ್ ಎನ್ ಐಟಿಕೆ ಎಫ್ ಆರ್.ಎಸ್.ಸಿ ಪ್ರೊಫೆಸರ್ ಡಾ. ಅರುಣ್ ಇಸ್ಲೊರ್ , ತ್ರಿಷಾ ಶಿಕ್ಷಣ ಸಂಸ್ಥೆಯ ಫೌಂಡರ್ ಸಿ. ಎ. ಗೋಪಾಲಕೃಷ್ಣ ಭಟ್ ವಿಸ್ಡಮ್ ಇನ್ಸ್ಟಿಟ್ಯೂಟ್ ಮ್ಯಾನೇಜಿಂಗ್ ಡೈರೆಕ್ಟ ರ್ ಡಾ. ಫ್ರಾನ್ಸಿಕ ತೇಜ್, ವಿಸ್ಡಮ್ ಇನ್ಸ್ಟಿಟ್ಯೂಟ್ ಸಿಇಓ ಡಾ. ಗುರುತೇಜ್ ಅಭಿಷೇಕ್ ಕ್ಷತ್ರಿಯ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು