10:03 AM Monday5 - January 2026
ಬ್ರೇಕಿಂಗ್ ನ್ಯೂಸ್
ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ…

ಇತ್ತೀಚಿನ ಸುದ್ದಿ

ಶಿಕ್ಷಕ, ಉದ್ಯಮಿ, ಸಾಮಾಜಿಕ ಧುರೀಣ ಬೆಂಜಮಿನ್ ಡಿಸೋಜ ಇನ್ನಿಲ್ಲ

28/07/2024, 18:53

ಮಂಗಳೂರು(reporterkarnataka.com): ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಕೆಲರಾಯ್‌ನ ಬೆಂಜಮಿನ್ ಡಿ ಸೋಜ( 75 ) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ದಿ। ಜೊನ್ ಮತ್ತು ದಿ।ಪಿಯಾದ್ ಡಿಸೋಜ ದಂಪತಿಯ 12 ಮಕ್ಕಳಲ್ಲಿ ಕೊನೆಯವರಾದ ಬೆಂಜಮಿನ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕೆಲರಾಯ್ ಸಂತ ಜೋಕಿಮ್ ಶಾಲೆಯಲ್ಲಿ ಪೂರೈಸಿ, ಫ್ರೌಡಶಾಲೆಯಿಂದ ಪದವಿಯ ವರೆಗೆ ಮಂಗಳೂರಿನ ಸಂತ ಅಲೋಶಿಯಸ್ ಸಂಸ್ಥೆಯಲ್ಲಿ ಕಲಿತು, ಮಂಗಳೂರಿನ ಸರಕಾರಿ ಕಾಲೇಜಿನಲ್ಲಿ ಶಿಕ್ಷಣ ಪದವಿ ಹಾಗೂ ತಿರುಪತಿಯ ವೆಂಕಟೇಶ್ವರ ವಿಶ್ವವಿದ್ಯಾಲಯದಿಂದ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಮಂಗಳೂರು, ಪುತ್ತೂರು ಮತ್ತು ಉಡುಪಿಯ ಕಲ್ಯಾಣ್ಪುರದ ಶಾಲೆಗಳಲ್ಲಿ ಶಿಕ್ಷಕರಾಗಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದರು.
ಶಿಕ್ಷಣ ಕ್ಷೇತ್ರದಿಂದ ಉದ್ಯಮ ರಂಗಕ್ಕೆ ಪಾದಾರ್ಪಣೆ ಮಾಡಿ ವಿವಿಧ ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಅತ್ಯುತ್ತಮ ಸಮಾಜ ಸೇವಕ ಪುರಸ್ಕಾರವನ್ನು ಪಡೆದುಕೊಂಡ ಬೆಂಜಮಿನ್ ಡಿಸೋಜ ಬಸ್ಸು ಮಾಲಕರ ಸಂಘದ ಕಾರ್ಯದರ್ಶಿಯಾಗಿ, ಭೂ ನ್ಯಾಯ ಮಂಡಲಿಯ ಸದಸ್ಯರಾಗಿ, ಬಜ್ಪೆ ಮಂಡಲ ಪಂಚಾಯತಿಯ ಪ್ರಧಾನ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಮಂಗಳೂರು ಧರ್ಮಪ್ರಾಂತ್ಯದ ಪಾಲನ ಪರಿಷತ್ತಿನಲ್ಲಿ ಮೂರು ಅವಧಿಗೆ ಸದಸ್ಯರಾಗಿ, ಕಥೊಲಿಕ ಸಭಾ ಸಂಘಟನೆಯ ಪ್ರಥಮ ಅಜೀವ ಸದಸ್ಯರಾಗಿ, ಧರ್ಮಕ್ಷೇತ್ರದಲ್ಲಿ ಗುರಿಕಾರ, ಪಾಲನ ಪರಿಷತ್ ಉಪಾಧ್ಯಕ್ಷ, ಉತ್ತಮ ಕಾರ್ಯಕ್ರಮ ನಿರ್ವಾಹಕರಾಗಿ ಗಣನೀಯ ಸೇವೆ ಸಲ್ಲಿಸಿದ್ದು, ಓರ್ವ ಗಾಯಕ ಮತ್ತು ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು