2:57 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಶಿಕ್ಷಕ, ಉದ್ಯಮಿ, ಸಾಮಾಜಿಕ ಧುರೀಣ ಬೆಂಜಮಿನ್ ಡಿಸೋಜ ಇನ್ನಿಲ್ಲ

28/07/2024, 18:53

ಮಂಗಳೂರು(reporterkarnataka.com): ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಕೆಲರಾಯ್‌ನ ಬೆಂಜಮಿನ್ ಡಿ ಸೋಜ( 75 ) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ದಿ। ಜೊನ್ ಮತ್ತು ದಿ।ಪಿಯಾದ್ ಡಿಸೋಜ ದಂಪತಿಯ 12 ಮಕ್ಕಳಲ್ಲಿ ಕೊನೆಯವರಾದ ಬೆಂಜಮಿನ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕೆಲರಾಯ್ ಸಂತ ಜೋಕಿಮ್ ಶಾಲೆಯಲ್ಲಿ ಪೂರೈಸಿ, ಫ್ರೌಡಶಾಲೆಯಿಂದ ಪದವಿಯ ವರೆಗೆ ಮಂಗಳೂರಿನ ಸಂತ ಅಲೋಶಿಯಸ್ ಸಂಸ್ಥೆಯಲ್ಲಿ ಕಲಿತು, ಮಂಗಳೂರಿನ ಸರಕಾರಿ ಕಾಲೇಜಿನಲ್ಲಿ ಶಿಕ್ಷಣ ಪದವಿ ಹಾಗೂ ತಿರುಪತಿಯ ವೆಂಕಟೇಶ್ವರ ವಿಶ್ವವಿದ್ಯಾಲಯದಿಂದ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಮಂಗಳೂರು, ಪುತ್ತೂರು ಮತ್ತು ಉಡುಪಿಯ ಕಲ್ಯಾಣ್ಪುರದ ಶಾಲೆಗಳಲ್ಲಿ ಶಿಕ್ಷಕರಾಗಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದರು.
ಶಿಕ್ಷಣ ಕ್ಷೇತ್ರದಿಂದ ಉದ್ಯಮ ರಂಗಕ್ಕೆ ಪಾದಾರ್ಪಣೆ ಮಾಡಿ ವಿವಿಧ ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಅತ್ಯುತ್ತಮ ಸಮಾಜ ಸೇವಕ ಪುರಸ್ಕಾರವನ್ನು ಪಡೆದುಕೊಂಡ ಬೆಂಜಮಿನ್ ಡಿಸೋಜ ಬಸ್ಸು ಮಾಲಕರ ಸಂಘದ ಕಾರ್ಯದರ್ಶಿಯಾಗಿ, ಭೂ ನ್ಯಾಯ ಮಂಡಲಿಯ ಸದಸ್ಯರಾಗಿ, ಬಜ್ಪೆ ಮಂಡಲ ಪಂಚಾಯತಿಯ ಪ್ರಧಾನ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಮಂಗಳೂರು ಧರ್ಮಪ್ರಾಂತ್ಯದ ಪಾಲನ ಪರಿಷತ್ತಿನಲ್ಲಿ ಮೂರು ಅವಧಿಗೆ ಸದಸ್ಯರಾಗಿ, ಕಥೊಲಿಕ ಸಭಾ ಸಂಘಟನೆಯ ಪ್ರಥಮ ಅಜೀವ ಸದಸ್ಯರಾಗಿ, ಧರ್ಮಕ್ಷೇತ್ರದಲ್ಲಿ ಗುರಿಕಾರ, ಪಾಲನ ಪರಿಷತ್ ಉಪಾಧ್ಯಕ್ಷ, ಉತ್ತಮ ಕಾರ್ಯಕ್ರಮ ನಿರ್ವಾಹಕರಾಗಿ ಗಣನೀಯ ಸೇವೆ ಸಲ್ಲಿಸಿದ್ದು, ಓರ್ವ ಗಾಯಕ ಮತ್ತು ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು