2:19 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಶಿಕ್ಷಕ, ಉದ್ಯಮಿ, ಸಾಮಾಜಿಕ ಧುರೀಣ ಬೆಂಜಮಿನ್ ಡಿಸೋಜ ಇನ್ನಿಲ್ಲ

28/07/2024, 18:53

ಮಂಗಳೂರು(reporterkarnataka.com): ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಕೆಲರಾಯ್‌ನ ಬೆಂಜಮಿನ್ ಡಿ ಸೋಜ( 75 ) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ದಿ। ಜೊನ್ ಮತ್ತು ದಿ।ಪಿಯಾದ್ ಡಿಸೋಜ ದಂಪತಿಯ 12 ಮಕ್ಕಳಲ್ಲಿ ಕೊನೆಯವರಾದ ಬೆಂಜಮಿನ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕೆಲರಾಯ್ ಸಂತ ಜೋಕಿಮ್ ಶಾಲೆಯಲ್ಲಿ ಪೂರೈಸಿ, ಫ್ರೌಡಶಾಲೆಯಿಂದ ಪದವಿಯ ವರೆಗೆ ಮಂಗಳೂರಿನ ಸಂತ ಅಲೋಶಿಯಸ್ ಸಂಸ್ಥೆಯಲ್ಲಿ ಕಲಿತು, ಮಂಗಳೂರಿನ ಸರಕಾರಿ ಕಾಲೇಜಿನಲ್ಲಿ ಶಿಕ್ಷಣ ಪದವಿ ಹಾಗೂ ತಿರುಪತಿಯ ವೆಂಕಟೇಶ್ವರ ವಿಶ್ವವಿದ್ಯಾಲಯದಿಂದ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಮಂಗಳೂರು, ಪುತ್ತೂರು ಮತ್ತು ಉಡುಪಿಯ ಕಲ್ಯಾಣ್ಪುರದ ಶಾಲೆಗಳಲ್ಲಿ ಶಿಕ್ಷಕರಾಗಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದರು.
ಶಿಕ್ಷಣ ಕ್ಷೇತ್ರದಿಂದ ಉದ್ಯಮ ರಂಗಕ್ಕೆ ಪಾದಾರ್ಪಣೆ ಮಾಡಿ ವಿವಿಧ ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಅತ್ಯುತ್ತಮ ಸಮಾಜ ಸೇವಕ ಪುರಸ್ಕಾರವನ್ನು ಪಡೆದುಕೊಂಡ ಬೆಂಜಮಿನ್ ಡಿಸೋಜ ಬಸ್ಸು ಮಾಲಕರ ಸಂಘದ ಕಾರ್ಯದರ್ಶಿಯಾಗಿ, ಭೂ ನ್ಯಾಯ ಮಂಡಲಿಯ ಸದಸ್ಯರಾಗಿ, ಬಜ್ಪೆ ಮಂಡಲ ಪಂಚಾಯತಿಯ ಪ್ರಧಾನ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಮಂಗಳೂರು ಧರ್ಮಪ್ರಾಂತ್ಯದ ಪಾಲನ ಪರಿಷತ್ತಿನಲ್ಲಿ ಮೂರು ಅವಧಿಗೆ ಸದಸ್ಯರಾಗಿ, ಕಥೊಲಿಕ ಸಭಾ ಸಂಘಟನೆಯ ಪ್ರಥಮ ಅಜೀವ ಸದಸ್ಯರಾಗಿ, ಧರ್ಮಕ್ಷೇತ್ರದಲ್ಲಿ ಗುರಿಕಾರ, ಪಾಲನ ಪರಿಷತ್ ಉಪಾಧ್ಯಕ್ಷ, ಉತ್ತಮ ಕಾರ್ಯಕ್ರಮ ನಿರ್ವಾಹಕರಾಗಿ ಗಣನೀಯ ಸೇವೆ ಸಲ್ಲಿಸಿದ್ದು, ಓರ್ವ ಗಾಯಕ ಮತ್ತು ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು