2:43 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಈದ್ ಉಲ್ ಫಿತ್ರ್ ಆಚರಣೆ; ಅತ್ಯುತ್ತಮ ರಾಜಕಾರಣಿಗಳು ಭಾರತಕ್ಕೆ ಬೇಕು: ಸ್ಪೀಕರ್ ಖಾದರ್

31/03/2025, 16:28

ಮಂಗಳೂರು(reporterkarnataka.com): ವಳಚ್ಚಿಲ್‌ನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಈದ್ ಉಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಉತ್ತಮ ವೈದ್ಯರು ಮತ್ತು ಎಂಜಿನಿಯರ್ ಗಳು ಎಷ್ಟು ಮುಖ್ಯವೋ ಅಷ್ಟೇ ಉತ್ತಮ ರಾಜಕಾರಣಿಗಳೂ ಈ ದೇಶಕ್ಕೆ ಮುಖ್ಯ. ಉತ್ತಮ ವಿದ್ಯಾರ್ಥಿಗಳು ಉತ್ತಮ ರಾಜಕಾರಣಿ ಆಗುವ ಕನಸನ್ನು ಹೊಂದಿರಬೇಕು ಎಂದರು.


ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಧೆಗಳ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಅವರು ಮಾತನಾಡಿ,ನೀವು ವೈದ್ಯರಾದರೆ ಅಥವಾ ಎಂಜಿನಿಯರಾದರೆ ಅಥವಾ ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿದರೆ ಆ ಕ್ಷೇತ್ರದಲ್ಲಿ ಸದಾ ಅತ್ಯುತ್ತಮ ಸೇವೆ ನೀಡಿ ಶ್ರೇಷ್ಠರಾಗಬೇಕು ಎಂದು ಕಿವಿ ಮಾತು ಹೇಳಿದರು.
ಸಂಸ್ಥೆಯ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್. ನಾಯಕ್ ಮಾತನಾಡಿ, ಎಕ್ಸ್ ಪರ್ಟ್ ನಲ್ಲಿ ಎಲ್ಲಾ ಹಬ್ಬಗಳನ್ನು ಸಮಾನವಾಗಿ ಆಚರಿಸಲಾಗುತ್ತದೆ ಮತ್ತು ವಿದ್ಯಾರ್ಥಿಗಳು ತಮ್ಮ ಬದುಕಿಗೆ ಹೊಸತನವನ್ನು ತಂದುಕೊಡುವ ಮೂಲಕ ರಾಷ್ಟ್ರದ ಜವಾಬ್ದಾರಿಯುತ ನಾಗರಿಕರಾಗಬೇಕೆಂದು ಕರೆ ನೀಡಿದರು.
ಟ್ರಸ್ಟಿ ಉಸ್ತಾದ್ ರಫೀಕ್ ಖಾನ್, ಪ್ರಾಂಶುಪಾಲ ಡಾ. ಎನ್ ಕೆ ವಿಜಯನ್, ಉಪಪ್ರಾಂಶುಪಾಲ(ಶೈಕ್ಷಣಿಕ) ಸುಬ್ರಹ್ಮಣ್ಯ ಉಡುಪ, ಉಪ ಪ್ರಾಂಶುಪಾಲೆ(ಆಡಳಿತ) ಧೃತಿ ವಿ ಹೆಗ್ಡೆ ಉಪಸ್ಥಿತರಿದ್ದರು.
ಮಾಹಿತಿ ತಂತ್ರಜ್ಞಾನ ವಿಭಾಗದ ನಿರ್ದೇಶಕ ಅಂಕುಶ್ ಎನ್ ನಾಯಕ್ ಅವರು ಸ್ವಾಗತಿಸಿದರು.
ವಿದ್ಯಾರ್ಥಿನಿ ಪ್ರಣತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಈದ್ ಉಲ್ ಫಿತ್ರ್ ಹಬ್ಬದ ಪ್ರಯುಕ್ತ ವಿಶೇಷ ಬಿರಿಯಾನಿ ಭೋಜನವನ್ನು ವಿದ್ಯಾರ್ಥಿಗಳು ಸವಿದರು.

ಇತ್ತೀಚಿನ ಸುದ್ದಿ

ಜಾಹೀರಾತು