5:18 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ

31/03/2025, 19:08

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಪಟ್ಟಣದಲ್ಲಿ ಈದ್-ಉಲ್-ಫಿತರ್ ಹಬ್ಬವನ್ನು ಭಕ್ತಿಭಾವದಿಂದ ಹಾಗೂ ಅದ್ಧೂರಿಯಾಗಿ ಆಚರಿಸಲಾಯಿತು.
ನಗರದ ವಿವಿಧ ಭಾಗಗಳಿಂದ ಸಾವಿರಾರು ಮುಸ್ಲಿಮರು ಪಾದಯಾತ್ರೆಯ ಮೂಲಕ ಈದ್ಗಾ ಮೈದಾನವನ್ನು ತಲುಪಿದರು. ಬೆಳಿಗ್ಗೆ 9:45ಕ್ಕೆ ಸಾಮೂಹಿಕ ನಮಾಜ್ ಸಲ್ಲಿಸಿದರು.
ಜಾಮಿಯಾ ಮಸೀದಿಯ ಇಮಾಮ್ ಮೌಲಾನಾ ಮುಹಮ್ಮದ್ ಆಸಿಫ್ ಅವರು ಧಾರ್ಮಿಕ ಪ್ರವಚನ ನೀಡುತ್ತಾ, ಈದ್-ಉಲ್-ಫಿತರ್‌ನ ಮಹತ್ವ ಮತ್ತು ಪ್ರವಾದಿ ಮುಹಮ್ಮದ್ (ಸ) ಅವರ ಆದರ್ಶಗಳನ್ನು ವಿವರಿಸಿದರು. ಇಸ್ಲಾಮ್ ಧರ್ಮ ಶಾಂತಿ ಮತ್ತು ಸಹೋದರತ್ವದ ಸಂದೇಶ ಸಾರುತ್ತದೆಯೆಂದು ಹೇಳಿದರು. ಅವರು ರೋಜಾ (ಉಪವಾಸ) ಮತ್ತು ಜಕಾತ್ (ದಾನ) ಕುರಿತು ಮಾತನಾಡಿ, ಇದು ದಯೆ ಮತ್ತು ಸಹಾಯಹಸ್ತವನ್ನು ಪ್ರೇರೇಪಿಸುತ್ತದೆ ಎಂದರು.


ಚಾರ್ಮಿನಾರ್ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ 7:45ಕ್ಕೆ ನಡೆದ ಸಾಮೂಹಿಕ ನಮಾಜ್‌ಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ನಮಾಜ್ ಮುಗಿದ ಬಳಿಕ ಜನರು ಪರಸ್ಪರ ಅಪ್ಪಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಮಂದಿ ಮತ್ತು ಸ್ನೇಹಿತರು ಭೇಟಿ ನೀಡಿ ಹಬ್ಬದ ಸಂತೋಷ ಹಂಚಿಕೊಂಡರು.
ಪ್ರತಿವರ್ಷದಂತೆ ಈ ಬಾರಿ ಮಹಿಳೆಯರಿಗೂ ಪ್ರತ್ಯೇಕ ಸಾಮೂಹಿಕ ನಮಾಜ್ ವ್ಯವಸ್ಥೆ ಮಾಡಲಾಗಿತ್ತು. ಮಹಿಳೆಯರೂ ಧಾರ್ಮಿಕ ಉತ್ಸಾಹದಿಂದ ಈದ್ಗಾ ಮೈದಾನದಲ್ಲಿ ನಮಾಜ್ ಸಲ್ಲಿಸಿದರು.
ಹಬ್ಬದ ಸಂದರ್ಭದಲ್ಲಿ ಪೊಲೀಸರು ಕಟ್ಟುನಿಟ್ಟಾದ ಭದ್ರತಾ ವ್ಯವಸ್ಥೆ ಕೈಗೊಂಡು, ಶಾಂತಿಯುತ ಸಂಭ್ರಮಕ್ಕೆ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು