9:48 AM Saturday16 - August 2025
ಬ್ರೇಕಿಂಗ್ ನ್ಯೂಸ್
‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ, ರಾಹುಲ್ ಗೂ ಬಳಸಿ: ಸಿದ್ದರಾಮಯ್ಯರಿಗೆ ಹಳ್ಳಿ ಹಕ್ಕಿ ವಿಶ್ವನಾಥ್ ಸವಾಲು  

25/10/2021, 13:06

ಬೆಂಗಳೂರು(reporterkarnataka.com):

ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಏಕವಚನ ಬಳಸಿ ಎಂದು ಹಳ್ಳಿಹಕ್ಕಿ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸವಾಲು ಹಾಕಿದರು.

ನೀವು ಎಲ್ಲರನ್ನೂ ಏಕವಚನದಲ್ಲಿ ಕರೆಯುತ್ತಿರಿ. ಮಾಜಿ ಪ್ರಧಾನಿ ದೇವೇಗೌಡರನ್ನು ಕೂಡ ನೀವು ಬಿಟ್ಟಿಲ್ಲ. ಕೇಳಿದ್ರೆ, ಏಕವಚನ ಹಳ್ಳಿ ಸೊಗಡು, ಅಭ್ಯಾಸವನ್ನು ಬದಲಾಯಿಸಲು ಆಗುವುದಿಲ್ಲ ಅಂಥ ಹೇಳುತ್ತೀರಿ. ಹಾಗಾದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಕೂಡ ಏಕವಚನದಲ್ಲಿ ಕರೆಯಿರಿ. ಸೋನಿಯಾ ಮೇಡಂ, ರಾಹುಲ್ ಜೀ ಅಂತ ಯಾಕೆ ಹೇಳುತ್ತೀರಿ ಎಂದು ವಿಶ್ವನಾಥ್ ಪ್ರಶ್ನಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಆರಿತೇ ನೀವು ಬಾದಾಮಿಗೆ ಹೋದ್ರೀ. ನಿಮ್ಮನ್ನು ಯಾರೂ ಸೋಲಿಸಿಲ್ಲ. ಮತದಾರರು ನಿಮ್ಮನ್ನು ಸೋಲಿಸಿಲ್ಲ. ನಿಮ್ಮ ದರ್ಪ, ಅಹಂಕಾರ ನಿಮ್ಮನ್ನು ಸೋಲಿಸಿದೆ.

ಡಾ.ಜಿ. ಪರಮೇಶ್ವರ್ ಅವರನ್ನು ನೀವು ಸೋಲಿಸಿಲ್ಲವೇ?  ಎಂದು ಅವರು ಮತ್ತೆ ಪ್ರಶ್ನೆ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು