4:43 AM Saturday6 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ, ರಾಹುಲ್ ಗೂ ಬಳಸಿ: ಸಿದ್ದರಾಮಯ್ಯರಿಗೆ ಹಳ್ಳಿ ಹಕ್ಕಿ ವಿಶ್ವನಾಥ್ ಸವಾಲು  

25/10/2021, 13:06

ಬೆಂಗಳೂರು(reporterkarnataka.com):

ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಏಕವಚನ ಬಳಸಿ ಎಂದು ಹಳ್ಳಿಹಕ್ಕಿ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸವಾಲು ಹಾಕಿದರು.

ನೀವು ಎಲ್ಲರನ್ನೂ ಏಕವಚನದಲ್ಲಿ ಕರೆಯುತ್ತಿರಿ. ಮಾಜಿ ಪ್ರಧಾನಿ ದೇವೇಗೌಡರನ್ನು ಕೂಡ ನೀವು ಬಿಟ್ಟಿಲ್ಲ. ಕೇಳಿದ್ರೆ, ಏಕವಚನ ಹಳ್ಳಿ ಸೊಗಡು, ಅಭ್ಯಾಸವನ್ನು ಬದಲಾಯಿಸಲು ಆಗುವುದಿಲ್ಲ ಅಂಥ ಹೇಳುತ್ತೀರಿ. ಹಾಗಾದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಕೂಡ ಏಕವಚನದಲ್ಲಿ ಕರೆಯಿರಿ. ಸೋನಿಯಾ ಮೇಡಂ, ರಾಹುಲ್ ಜೀ ಅಂತ ಯಾಕೆ ಹೇಳುತ್ತೀರಿ ಎಂದು ವಿಶ್ವನಾಥ್ ಪ್ರಶ್ನಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಆರಿತೇ ನೀವು ಬಾದಾಮಿಗೆ ಹೋದ್ರೀ. ನಿಮ್ಮನ್ನು ಯಾರೂ ಸೋಲಿಸಿಲ್ಲ. ಮತದಾರರು ನಿಮ್ಮನ್ನು ಸೋಲಿಸಿಲ್ಲ. ನಿಮ್ಮ ದರ್ಪ, ಅಹಂಕಾರ ನಿಮ್ಮನ್ನು ಸೋಲಿಸಿದೆ.

ಡಾ.ಜಿ. ಪರಮೇಶ್ವರ್ ಅವರನ್ನು ನೀವು ಸೋಲಿಸಿಲ್ಲವೇ?  ಎಂದು ಅವರು ಮತ್ತೆ ಪ್ರಶ್ನೆ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು