2:03 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ, ರಾಹುಲ್ ಗೂ ಬಳಸಿ: ಸಿದ್ದರಾಮಯ್ಯರಿಗೆ ಹಳ್ಳಿ ಹಕ್ಕಿ ವಿಶ್ವನಾಥ್ ಸವಾಲು  

25/10/2021, 13:06

ಬೆಂಗಳೂರು(reporterkarnataka.com):

ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಏಕವಚನ ಬಳಸಿ ಎಂದು ಹಳ್ಳಿಹಕ್ಕಿ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸವಾಲು ಹಾಕಿದರು.

ನೀವು ಎಲ್ಲರನ್ನೂ ಏಕವಚನದಲ್ಲಿ ಕರೆಯುತ್ತಿರಿ. ಮಾಜಿ ಪ್ರಧಾನಿ ದೇವೇಗೌಡರನ್ನು ಕೂಡ ನೀವು ಬಿಟ್ಟಿಲ್ಲ. ಕೇಳಿದ್ರೆ, ಏಕವಚನ ಹಳ್ಳಿ ಸೊಗಡು, ಅಭ್ಯಾಸವನ್ನು ಬದಲಾಯಿಸಲು ಆಗುವುದಿಲ್ಲ ಅಂಥ ಹೇಳುತ್ತೀರಿ. ಹಾಗಾದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಕೂಡ ಏಕವಚನದಲ್ಲಿ ಕರೆಯಿರಿ. ಸೋನಿಯಾ ಮೇಡಂ, ರಾಹುಲ್ ಜೀ ಅಂತ ಯಾಕೆ ಹೇಳುತ್ತೀರಿ ಎಂದು ವಿಶ್ವನಾಥ್ ಪ್ರಶ್ನಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಆರಿತೇ ನೀವು ಬಾದಾಮಿಗೆ ಹೋದ್ರೀ. ನಿಮ್ಮನ್ನು ಯಾರೂ ಸೋಲಿಸಿಲ್ಲ. ಮತದಾರರು ನಿಮ್ಮನ್ನು ಸೋಲಿಸಿಲ್ಲ. ನಿಮ್ಮ ದರ್ಪ, ಅಹಂಕಾರ ನಿಮ್ಮನ್ನು ಸೋಲಿಸಿದೆ.

ಡಾ.ಜಿ. ಪರಮೇಶ್ವರ್ ಅವರನ್ನು ನೀವು ಸೋಲಿಸಿಲ್ಲವೇ?  ಎಂದು ಅವರು ಮತ್ತೆ ಪ್ರಶ್ನೆ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು