4:51 PM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್!: ಸಕಾಲದಲ್ಲಿ ಚಿಕಿತ್ಸೆ ಲಭಿಸದೆ 19ರ ಯುವಕ ಸಾವು; 3 ವರ್ಷದಲ್ಲಿ 3ನೇ ಬಲಿ!!

31/08/2024, 15:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಸಮೀಪದ ಕೋಣೆಗೂಡು ಗ್ರಾಮದ ಯುವಕನೊಬ್ಬ ಸಕಾಲದಲ್ಲಿ ಚಿಕಿತ್ಸೆ ಲಭಿಸದೆ ಮೃತಪಟ್ಟ ದಾರುಣ ಘಟನೆ ನಡೆದಿದೆ. ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್ ಆಗಿದೆ. ಜೋಳಿಗೆಯಲ್ಲೇ ಅನಾರೋಗ್ಯಪೀಡಿತ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ, ಮೃತದೇಹವನ್ನು ಜೋಳಿಗೆಯಲ್ಲೇ ವಾಪಸ್ ತರಲಾಗಿದೆ.


ಕೋಣೆಗೂಡು ಗ್ರಾಮದ ಅವಿನಾಶ್ ಎಂಬ 19ರ ಹರೆಯದ ಯುವಕ ಅನಾರೋಗ್ಯಕ್ಕೀಡಾಗಿದ್ದರು. ರಸ್ತೆ ಸಂಪರ್ಕವಿಲ್ಲದ ಕುಗ್ರಾಮ ಆಗಿರುವುದರಿಂದ ಅನಾರೋಗ್ಯಪೀಡಿತ ಯುವಕನನ್ನು ಬೆನ್ನ ಮೇಲೆ ಹಾಕಿ ಕೊಂಡು ಸಂಬಂಧಿಕರು ಮರದ ಕಾಲುಸಂಕವಿರುವ ತೋಡು ದಾಟಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದರು. ಮತ್ತೆ ಮೃತದೇಹವನ್ನು ಅದೇ ರೀತಿ ಜೋಳಿಗೆಯಲ್ಲಿ ಹಾಕಿ ಸಾಗಿಸಲಾಯಿತು. ಇಲ್ಲಿಗೆ ಆ್ಯಂಬ್ಯುಲೆನ್ಸ್ ಬಂದ್ರೂ ನಿಲ್ಲೋದು ಊರಿನಿಂದ 1.5 ಕಿ.ಮೀ. ದೂರದಲ್ಲಿ!. ಆ್ಯಂಬ್ಯುಲೆನ್ಸ್ ಬಂದ್ರು ಹಳ್ಳ ದಾಟೋಕ್ಕೆ ಆಗೋಲ್ಲ.
ಜೋಳಿಗೆಯಲ್ಲಿ ಹೊತ್ಕೊಂಡೆ ಕಾಲು ಸಂಕ ದಾಟಬೇಕು.
ಮೂರು ವರ್ಷದಲ್ಲಿ ಒಂದೇ ಗ್ರಾಮದ ಮೂರು ಜನ ಸಾವನ್ನಪ್ಪಿದ್ದಾರೆ. ಗಂಭೀರ ಕಾಯಿಲೆ ಬಿದ್ರೆ ಊರಿನ ಜನ ಇದ್ರೆ ಮಾತ್ರ ಜೀವ ಉಳಿಯೋದು ಎನ್ನುವ ಪರಿಸ್ಥಿತಿ ಇದೆ.
ಜೀವ ಉಳಿಸಿಕೊಳ್ಳೋಕೆ ಸೇತುವೆ ರಸ್ತೆ ಮಾಡಿ‌ ಎಂದು ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ಕೋಣೆಗೂಡು ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು