9:45 PM Thursday9 - April 2026
ಬ್ರೇಕಿಂಗ್ ನ್ಯೂಸ್
Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ…

ಇತ್ತೀಚಿನ ಸುದ್ದಿ

ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್!: ಸಕಾಲದಲ್ಲಿ ಚಿಕಿತ್ಸೆ ಲಭಿಸದೆ 19ರ ಯುವಕ ಸಾವು; 3 ವರ್ಷದಲ್ಲಿ 3ನೇ ಬಲಿ!!

31/08/2024, 15:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಸಮೀಪದ ಕೋಣೆಗೂಡು ಗ್ರಾಮದ ಯುವಕನೊಬ್ಬ ಸಕಾಲದಲ್ಲಿ ಚಿಕಿತ್ಸೆ ಲಭಿಸದೆ ಮೃತಪಟ್ಟ ದಾರುಣ ಘಟನೆ ನಡೆದಿದೆ. ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್ ಆಗಿದೆ. ಜೋಳಿಗೆಯಲ್ಲೇ ಅನಾರೋಗ್ಯಪೀಡಿತ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ, ಮೃತದೇಹವನ್ನು ಜೋಳಿಗೆಯಲ್ಲೇ ವಾಪಸ್ ತರಲಾಗಿದೆ.


ಕೋಣೆಗೂಡು ಗ್ರಾಮದ ಅವಿನಾಶ್ ಎಂಬ 19ರ ಹರೆಯದ ಯುವಕ ಅನಾರೋಗ್ಯಕ್ಕೀಡಾಗಿದ್ದರು. ರಸ್ತೆ ಸಂಪರ್ಕವಿಲ್ಲದ ಕುಗ್ರಾಮ ಆಗಿರುವುದರಿಂದ ಅನಾರೋಗ್ಯಪೀಡಿತ ಯುವಕನನ್ನು ಬೆನ್ನ ಮೇಲೆ ಹಾಕಿ ಕೊಂಡು ಸಂಬಂಧಿಕರು ಮರದ ಕಾಲುಸಂಕವಿರುವ ತೋಡು ದಾಟಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದರು. ಮತ್ತೆ ಮೃತದೇಹವನ್ನು ಅದೇ ರೀತಿ ಜೋಳಿಗೆಯಲ್ಲಿ ಹಾಕಿ ಸಾಗಿಸಲಾಯಿತು. ಇಲ್ಲಿಗೆ ಆ್ಯಂಬ್ಯುಲೆನ್ಸ್ ಬಂದ್ರೂ ನಿಲ್ಲೋದು ಊರಿನಿಂದ 1.5 ಕಿ.ಮೀ. ದೂರದಲ್ಲಿ!. ಆ್ಯಂಬ್ಯುಲೆನ್ಸ್ ಬಂದ್ರು ಹಳ್ಳ ದಾಟೋಕ್ಕೆ ಆಗೋಲ್ಲ.
ಜೋಳಿಗೆಯಲ್ಲಿ ಹೊತ್ಕೊಂಡೆ ಕಾಲು ಸಂಕ ದಾಟಬೇಕು.
ಮೂರು ವರ್ಷದಲ್ಲಿ ಒಂದೇ ಗ್ರಾಮದ ಮೂರು ಜನ ಸಾವನ್ನಪ್ಪಿದ್ದಾರೆ. ಗಂಭೀರ ಕಾಯಿಲೆ ಬಿದ್ರೆ ಊರಿನ ಜನ ಇದ್ರೆ ಮಾತ್ರ ಜೀವ ಉಳಿಯೋದು ಎನ್ನುವ ಪರಿಸ್ಥಿತಿ ಇದೆ.
ಜೀವ ಉಳಿಸಿಕೊಳ್ಳೋಕೆ ಸೇತುವೆ ರಸ್ತೆ ಮಾಡಿ‌ ಎಂದು ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ಕೋಣೆಗೂಡು ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು