4:38 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್!: ಸಕಾಲದಲ್ಲಿ ಚಿಕಿತ್ಸೆ ಲಭಿಸದೆ 19ರ ಯುವಕ ಸಾವು; 3 ವರ್ಷದಲ್ಲಿ 3ನೇ ಬಲಿ!!

31/08/2024, 15:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಸಮೀಪದ ಕೋಣೆಗೂಡು ಗ್ರಾಮದ ಯುವಕನೊಬ್ಬ ಸಕಾಲದಲ್ಲಿ ಚಿಕಿತ್ಸೆ ಲಭಿಸದೆ ಮೃತಪಟ್ಟ ದಾರುಣ ಘಟನೆ ನಡೆದಿದೆ. ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್ ಆಗಿದೆ. ಜೋಳಿಗೆಯಲ್ಲೇ ಅನಾರೋಗ್ಯಪೀಡಿತ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ, ಮೃತದೇಹವನ್ನು ಜೋಳಿಗೆಯಲ್ಲೇ ವಾಪಸ್ ತರಲಾಗಿದೆ.


ಕೋಣೆಗೂಡು ಗ್ರಾಮದ ಅವಿನಾಶ್ ಎಂಬ 19ರ ಹರೆಯದ ಯುವಕ ಅನಾರೋಗ್ಯಕ್ಕೀಡಾಗಿದ್ದರು. ರಸ್ತೆ ಸಂಪರ್ಕವಿಲ್ಲದ ಕುಗ್ರಾಮ ಆಗಿರುವುದರಿಂದ ಅನಾರೋಗ್ಯಪೀಡಿತ ಯುವಕನನ್ನು ಬೆನ್ನ ಮೇಲೆ ಹಾಕಿ ಕೊಂಡು ಸಂಬಂಧಿಕರು ಮರದ ಕಾಲುಸಂಕವಿರುವ ತೋಡು ದಾಟಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದರು. ಮತ್ತೆ ಮೃತದೇಹವನ್ನು ಅದೇ ರೀತಿ ಜೋಳಿಗೆಯಲ್ಲಿ ಹಾಕಿ ಸಾಗಿಸಲಾಯಿತು. ಇಲ್ಲಿಗೆ ಆ್ಯಂಬ್ಯುಲೆನ್ಸ್ ಬಂದ್ರೂ ನಿಲ್ಲೋದು ಊರಿನಿಂದ 1.5 ಕಿ.ಮೀ. ದೂರದಲ್ಲಿ!. ಆ್ಯಂಬ್ಯುಲೆನ್ಸ್ ಬಂದ್ರು ಹಳ್ಳ ದಾಟೋಕ್ಕೆ ಆಗೋಲ್ಲ.
ಜೋಳಿಗೆಯಲ್ಲಿ ಹೊತ್ಕೊಂಡೆ ಕಾಲು ಸಂಕ ದಾಟಬೇಕು.
ಮೂರು ವರ್ಷದಲ್ಲಿ ಒಂದೇ ಗ್ರಾಮದ ಮೂರು ಜನ ಸಾವನ್ನಪ್ಪಿದ್ದಾರೆ. ಗಂಭೀರ ಕಾಯಿಲೆ ಬಿದ್ರೆ ಊರಿನ ಜನ ಇದ್ರೆ ಮಾತ್ರ ಜೀವ ಉಳಿಯೋದು ಎನ್ನುವ ಪರಿಸ್ಥಿತಿ ಇದೆ.
ಜೀವ ಉಳಿಸಿಕೊಳ್ಳೋಕೆ ಸೇತುವೆ ರಸ್ತೆ ಮಾಡಿ‌ ಎಂದು ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ಕೋಣೆಗೂಡು ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು