2:56 PM Sunday8 - February 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7…

ಇತ್ತೀಚಿನ ಸುದ್ದಿ

ಸ್ಪರ್ಧೆ ಕುರಿತು ಬಿಜೆಪಿ ಮುಖಂಡರ ಬಳಿ ಹಿಂದೆಯೇ ಹೇಳಿದ್ದೆ; ಇದು ಬಂಡಾಯ ಸ್ಪರ್ಧೆಯಲ್ಲ, ಕರಾವಳಿಗರ ಸ್ವಾಭಿಮಾನ: ಹರೀಶ್ ಆಚಾರ್ಯ

14/05/2024, 20:16

ಮಂಗಳೂರು(reporterkarnataka.com): ನೈಋತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಲ್ಲಿ
ನಾನು ಬಂಡಾಯ, ಪಕ್ಷೇತರನಾಗಿ ಸ್ಪರ್ಧಿಸುತ್ತಿಲ್ಲ, ಬದಲಿಗೆ ‘ಅಭ್ಯರ್ಥಿ’ಯಾಗಿ ಸ್ಪರ್ಧಿಸುತ್ತಿದ್ದೇನೆ. ನನ್ನ ಸ್ಪರ್ಧೆಯ ಕುರಿತು ಬಿಜೆಪಿ ಹಿರಿಯ ಮುಖಂಡರ ಬಳಿ ಈ ಹಿಂದೆಯೇ ಹೇಳಿದ್ದೆ ಎಂದು ಮಂಗಳೂರು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಎಸ್.ಆರ್. ಹರೀಶ್ ಆಚಾರ್ಯ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪರ್ಧೆಯ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಕರಾವಳಿಯ ನಾನಾ ಕಡೆಗಳಿಗೆ ಪ್ರವಾಸ ಮಾಡಿ, ಶಿಕ್ಷಣ ಕ್ಷೇತ್ರದ ಸಮಸ್ಯೆಯ ಬಗ್ಗೆ ತಿಳಿದುಕೊಂಡಿದ್ದೇನೆ. ಆದರೆ ಈ ಬಾರಿ ಕರಾವಳಿ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಯಾವುದೇ ರಾಷ್ಟ್ರೀಯ ಪಕ್ಷಗಳು ಕರಾವಳಿ ಜಿಲ್ಲೆಗಳಲ್ಲಿ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳಿಗೆ ಪ್ರಾತಿನಿಧ್ಯ ನೀಡದೆ ನಿರ್ಲಕ್ಷೃ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ಧ್ವನಿಯಾಗಿ ಕರಾವಳಿಯ ಸ್ವಾಭಿಮಾನದ ಹಿನ್ನಲೆಯಲ್ಲಿ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದರು.
ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳಿದ್ದು, ಅವುಗಳನ್ನು ಸರಕಾರದ ಮುಂದಿಡಬೇಕಿದೆ. ಶಿಕ್ಷಕರ ಧ್ವನಿಯಾಗಿ ಕೆಲಸ ನಿರ್ವಹಿಸಬೇಕು ಎಂಬ ಉದ್ದೇಶಕ್ಕೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಮೇ 15ಕ್ಕೆ ನಾಮಪತ್ರ ಸಲ್ಲಿಸುತ್ತೇನೆ. ನಾನು ಎಬಿವಿಪಿ, ಸಹಕಾರ ಭಾರತಿ ಹಿನ್ನೆಲೆಯಿಂದ ಬಂದವನು‌ ಎಂದು ಅವರು ಹೇಳಿದರು.
ಶಿಕ್ಷಕರೆಲ್ಲರೂ ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿದ್ದಾರೆ. ಕಳೆದ ಸುಮಾರು 20 ವರ್ಷಗಳಿಂದ ಈ ಭಾಗದಲ್ಲಿ ವಿದ್ಯಾರ್ಥಿ ಮುಖಂಡನಾಗಿ, ಅಧ್ಯಾಪಕರ ಸಂಘಟನೆಗಳೊಂದಿಗೆ ನಿರಂತರ ಸಂಪರ್ಕವನ್ನಿಟ್ಟುಕೊಂಡು ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯನಾಗಿಯೂ ಸೇವೆ ಸಲ್ಲಿಸಿ, ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕ ಸಮುದಾಯದ ಹಲವಾರು ಸಮಸ್ಯೆಗಳಿಗೆ ಧ್ವನಿಯಾಗಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಈ ಮೂಲಕ ಶಿಕ್ಷಕ ಸಮುದಾಯಕ್ಕೆ ಸೂಕ್ತ ನಾಯಕತ್ವವನ್ನು ನೀಡುವ ಪ್ರಯತ್ನವನ್ನು ಮಾಡಿದ್ದೇನೆ ಎಂದರು.
ಮುಖಂಡರಾದ ಡಾ.ರಾಜಮೋಹನ್ ರಾವ್, ನಿತೀಶ್ ಸಾಲ್ಯಾನ್, ಜಿತಿನ್ ಜಿಜೋ, ಜ್ಯೋತಿ ರೈ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು