4:02 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಪವರ್ ಮ್ಯಾನ್

18/07/2025, 19:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿದ್ಯುತ್ ಶಾಕ್ ನಿಂದ ಯುವ ಲೈನ್ ಮ್ಯಾನ್ ಸಾವನ್ನಪ್ಪಿದ ದಾರುಣ ಘಟನೆ ಎನ್.ಆರ್. ಪುರ ತಾಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿದೆ.
ಪ್ರವೀಣ್ (26) ಮೃತ ದುರ್ದೈವಿ. ಕಳೆದ ಒಂದೂವರೆ ತಿಂಗಳ ಹಿಂದಷ್ಟೆ ಪ್ರವೀಣ್ ಅವರ ಮದುವೆಯಾಗಿತ್ತು.
ವಿದ್ಯುತ್ ಲೈನ್ ದುರಸ್ತಿಗೆ ಕಂಬ ಹತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕಂಬ ಹತ್ತಿ ಫ್ಯೂಸ್ ಹಾಕುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ಕೆಳಗೆ ಬಿದ್ದು ಒದ್ದಾಡುತ್ತಿದ್ದ ಪ್ರವೀಣ್ ಅವರನ್ನು ಸ್ಥಳಿಯರು ಹಾಗೂ ಸಿಬ್ಬಂದಿಗಳು ಸೇರಿ ಆಸ್ಪತ್ರೆಗೆ ಸಾಗಿಸಿದರೂ ತೀವ್ರ ಅಸ್ವಸ್ಥತನಾಗಿದ್ದ ಪ್ರವೀಣ್ ಮಾರ್ಗ ಮಧ್ಯೆ ಕೊನೆಯುಸಿರೆಳೆದರು.
ಮೂಲತಃ ಬಾಗಲಕೋಟೆಯವರಾದ ಪ್ರವೀಣ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಈ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪದ ಹೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿದೆ.
ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು