10:07 PM Saturday3 - May 2025
ಬ್ರೇಕಿಂಗ್ ನ್ಯೂಸ್
ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:… ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ… Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ… Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ… Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೆ ಅಶ್ಲೀಲ ಪದ… ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ Chikkamagaluru | ಜಯಪುರ ಅತ್ತಿಕುಡಿಗೆ ರಸ್ತೆ ಬದಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ Mangaluru | ಹುಟ್ಟೂರು ಬಂಟ್ವಾಳದತ್ತ ಸುಹಾಸ್ ಶೆಟ್ಟಿ ಪಾರ್ಥಿವ ಶರೀರ ಮೆರವಣಿಗೆ: ಬಿಗಿ… ಸುಹಾಸ್ ಶೆಟ್ಟಿ ಕೊಲೆ: ದ.ಕ. ಬಂದ್ ಗೆ ವಿಎಚ್ ಪಿ, ಭಜರಂಗದಳ ಕರೆ

ಇತ್ತೀಚಿನ ಸುದ್ದಿ

Elephant Attack | ಪುತ್ತೂರು: ಕಾಡಾನೆ ದಾಳಿಗೆ ಮಹಿಳೆ ದಾರುಣ ಸಾವು; ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ

30/04/2025, 12:35

ಪುತ್ತೂರು(reporterkarnataka.com): ಪುತ್ತೂರು ತಾಲೂಕಿನ‌.ಮಾಡಾವು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ತೆರಳುತ್ತಿದ್ದ ಸೆಲ್ಲಮ್ಮ (65) ಎಂಬ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿದೆ. ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು.
ಮೃತ ಮಹಿಳೆ ಮಾಡವು ಗ್ರಾಮದ ಕನಿಯಾರು ಸಿ ಆರ್ ಸಿ ಕಾಲೊನಿ ನಿವಾಸಿಯಾಗಿದ್ದರು. ಅವರು ಕೆ ಎಫ್ ಡಿ ಸಿ ಯ ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಎಂದಿನಂತೆ ಮಂಗಳವಾರ ಬೆಳಿಗ್ಗೆ ಹತ್ರ್ಯಡ್ಕ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ದಾಳಿ ಮಾಡಿ ಸೆಲ್ಲಮ್ಮ ಅವರನ್ನು ತುಳಿದು ಗಂಭೀರ ಗಾಯಗೊಳಿಸಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮೃತರ ಪುತ್ರ ಟಿ ಯೋಗರಾಜ್ ಅವರು ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ಸಚಿವ ಈಶ್ವರ ಖಂಡ್ರೆ ಸಂತಾಪ:* ಪುತ್ತೂರು ತಾಲೂಕಿನ ಮಾಡಾವು ಗ್ರಾಮದಲ್ಲಿ 65 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ ದುಃಖದ ಸಂದರ್ಭದಲ್ಲಿ ಸರ್ಕಾರ ಅವರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ಮೃತ ಮಹಿಳೆಯ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಕ್ಕೆ ಈ ನೋವು ತಾಳಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು