8:54 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಮುಂದುವರೆದ ಆನೆ -ಮಾನವ ಸಂಘರ್ಷ: ಒಂದು ಬಲಿ; ಮತ್ತೊಬ್ಬನ ಮೇಲೂ ದಾಳಿ

08/07/2025, 13:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಕೊಡಗಿನಲ್ಲಿ ಸೈಕ್ಲಿಂಗ್ ಮಾಡುತ್ತಿದ್ದ ವ್ಯಕ್ತಿ ಒಬ್ಬನ ಮೇಲೆ ಆನೆ ದಾಳಿ ನಡೆಸಿ ಸೈಕಲ್ ಸಂಪೂರ್ಣ ನಜ್ಜುಗುಜ್ಜು ಆಗಿ ಸವಾರ ಪರಾಗಿರುವ ಬೆನ್ನಲ್ಲೇ ಅದೇ ಮಾರ್ಗದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಕೊಡಗಿನ ಪೊನ್ನoಪೇಟೆ ತಾಲ್ಲೂಕಿನ ಬಾಳೆಲೆ ಸಮೀಪ ಪೊನ್ನಪ್ಪಸಂತೆ ರಸ್ತೆಯಲ್ಲಿ ಬೆಳಗಿನ ಜಾವ 7:00 ಸುಮಾರಿಗೆ ಕೋಣನ ಕಟ್ಟೆಯ ನಿವಾಸಿ ಹಾಗೂ ಬಾಳಲಿಯಲ್ಲಿ ಜೆರಾಕ್ಸ್ ಅಂಗಡಿಯ ಮಾಲೀಕ ಅಜಯ್ ಎಂಬುವನು ಬೆಳಿಗ್ಗೆ ಸೈಕ್ಲಿಂಗ್ ಮಾಡುತ್ತಿರುವಾಗ ಆನೆ ದಾಳಿ ನಡೆಸಿದೆ.
ಅಜಯ್ ಪ್ರಾಣಪಾಯದಿಂದ ಪಾರಾಗಿದ್ದು ಸೈಕಲ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ, ಅದೇ ಮಾರ್ಗದಲ್ಲಿ ತೆರಳುತ್ತಿದ್ದ ವ್ಯಕ್ತಿ ಮೇಲೆ ದಾಳಿ ನಡೆಸಿ ಆತನನ್ನು ಬಲಿ ಪಡೆದುಕೊಂಡಿದೆ. ಸ್ಥಳಕ್ಕೆ ಅರಣ್ಯಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ನಿರಂತರ ಆನೆ ಹಾವಳಿ ವಿರುದ್ದ ಆಕ್ರೋಶಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು