9:11 PM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಮುಂದುವರೆದ ಆನೆ -ಮಾನವ ಸಂಘರ್ಷ: ಒಂದು ಬಲಿ; ಮತ್ತೊಬ್ಬನ ಮೇಲೂ ದಾಳಿ

08/07/2025, 13:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಕೊಡಗಿನಲ್ಲಿ ಸೈಕ್ಲಿಂಗ್ ಮಾಡುತ್ತಿದ್ದ ವ್ಯಕ್ತಿ ಒಬ್ಬನ ಮೇಲೆ ಆನೆ ದಾಳಿ ನಡೆಸಿ ಸೈಕಲ್ ಸಂಪೂರ್ಣ ನಜ್ಜುಗುಜ್ಜು ಆಗಿ ಸವಾರ ಪರಾಗಿರುವ ಬೆನ್ನಲ್ಲೇ ಅದೇ ಮಾರ್ಗದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಕೊಡಗಿನ ಪೊನ್ನoಪೇಟೆ ತಾಲ್ಲೂಕಿನ ಬಾಳೆಲೆ ಸಮೀಪ ಪೊನ್ನಪ್ಪಸಂತೆ ರಸ್ತೆಯಲ್ಲಿ ಬೆಳಗಿನ ಜಾವ 7:00 ಸುಮಾರಿಗೆ ಕೋಣನ ಕಟ್ಟೆಯ ನಿವಾಸಿ ಹಾಗೂ ಬಾಳಲಿಯಲ್ಲಿ ಜೆರಾಕ್ಸ್ ಅಂಗಡಿಯ ಮಾಲೀಕ ಅಜಯ್ ಎಂಬುವನು ಬೆಳಿಗ್ಗೆ ಸೈಕ್ಲಿಂಗ್ ಮಾಡುತ್ತಿರುವಾಗ ಆನೆ ದಾಳಿ ನಡೆಸಿದೆ.
ಅಜಯ್ ಪ್ರಾಣಪಾಯದಿಂದ ಪಾರಾಗಿದ್ದು ಸೈಕಲ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ, ಅದೇ ಮಾರ್ಗದಲ್ಲಿ ತೆರಳುತ್ತಿದ್ದ ವ್ಯಕ್ತಿ ಮೇಲೆ ದಾಳಿ ನಡೆಸಿ ಆತನನ್ನು ಬಲಿ ಪಡೆದುಕೊಂಡಿದೆ. ಸ್ಥಳಕ್ಕೆ ಅರಣ್ಯಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ನಿರಂತರ ಆನೆ ಹಾವಳಿ ವಿರುದ್ದ ಆಕ್ರೋಶಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು