6:55 PM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡರ ಚುನಾವಣಾ ರಾಜಕೀಯ ಅಂತ್ಯ: ಬಿಜೆಪಿಯಿಂದ ನಾಗರಾಜಗೆ ರಾಜ್ಯಸಭೆ ಟಿಕೆಟ್

08/06/2026, 18:15

ಬೆಂಗಳೂರು(reporterkarnataka.com): ಕರ್ನಾಟಕದಿಂದ ರಾಜ್ಯಸಭೆಗೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಭಾನುವಾರ ರಾತ್ರಿ ಘೋಷಿಸಿದ್ದು, ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರ ಸಂಸದೀಯ ರಾಜಕೀಯ ಇನಿಂಗ್ಸ್ ಬಹುತೇಕ ತೆರೆಬಿದ್ದಿರುವುದರ ಸ್ಪಷ್ಟ ಸೂಚನೆಯಾಗಿದೆ.

*ಬಿಜೆಪಿಯಿಂದ ನಾಗರಾಜಗೆ ರಾಜ್ಯಸಭೆ ಟಿಕೆಟ್:*
ಬಿಜೆಪಿಯಿಂದ ರಾಜ್ಯಸಭೆ ಅಭ್ಯರ್ಥಿಯಾಗಿ ಪ್ರೊ. ಎಂ. ನಾಗರಾಜ ಅವರ ಆಯ್ಕೆಯು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಸಂಸದೀಯ ರಾಜಕೀಯ ಜೀವನದ ಅಂತ್ಯದ ಸ್ಪಷ್ಟ ಸುಳಿವು ನೀಡಿದೆ. ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯಸಭೆಗೆ ಬಿಜೆಪಿಯ ಹೊಸ ಅಭ್ಯರ್ಥಿಯಾಗಿ ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಪ್ರೊ. ಎಂ. ನಾಗರಾಜ ಅವರನ್ನು ಘೋಷಿಸಿದೆ.• ದೇವೇಗೌಡರ ರಾಜಕೀಯ ಜೀವನದ ಅನಿಶ್ಚಿತತೆ ಈ ಬೆಳವಣಿಗೆಯು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಸಂಸದೀಯ ರಾಜಕೀಯ ಇನಿಂಗ್ಸ್ ಬಹುತೇಕ ಅಂತ್ಯಗೊಂಡಿರುವುದರ ಸ್ಪಷ್ಟ ಸೂಚನೆಯಾಗಿದೆ.•

*ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ:*
ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿ ಖಾನ್ ಹಾಗೂ ಪವನ್ ಖೇರಾ ಅವರನ್ನು ರಾಜ್ಯಸಭೆಗೆ ಕಳುಹಿಸಲು ಕಾಂಗ್ರೆಸ್ ನಿರ್ಧರಿಸಿದೆ. ಮಧ್ಯಪ್ರದೇಶದ ರಾಜಕೀಯ ತಂತ್ರ ಮಧ್ಯಪ್ರದೇಶದಲ್ಲಿ ಬಿಜೆಪಿ ಮಹೇಶ್ ಕೇವತ್ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪೈಪೋಟಿ ನೀಡಲು ಮುಂದಾಗಿದೆ. ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳು ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಎಐ ಬಳಸಿ ಸಂಸ್ಕರಿಸಲಾಗಿದೆ. ಪಿವಿ ಡಿಜಿಟಲ್ ತಂಡ ಪರಿಶೀಲಿಸಿದೆ.
ಮಧ್ಯಪ್ರದೇಶದಲ್ಲಿ ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಮಹೇಶ್ ಕೇವತ್ ಅವರನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರಿಗೆ ಸಂಕಷ್ಟ ಉಂಟು ಮಾಡಿದೆ.
ಭಾನುವಾರ ಮಧ್ಯರಾತ್ರಿ ವೇಳೆಗೆ ಬಿಜೆಪಿ ಪ್ರಕಟಿಸಿದ ಪಟ್ಟಿಯಲ್ಲಿ, ಪ್ರೊ. ಎಂ. ನಾಗರಾಜ ಅವರನ್ನು ಕರ್ನಾಟಕದಿಂದ ಟಿಕೆಟ್ ನೀಡಿದೆ. ತೆರವಾಗಿರುವ ನಾಲ್ಕು ಸ್ಥಾನಗಳ ಪೈಕಿ ಬಿಜೆಪಿಗೆ ಒಂದರಲ್ಲಿ ಮಾತ್ರ ಗೆಲುವು ಸಾಧಿಸುವ ಅವಕಾಶ ಇದೆ. ದೇವೇಗೌಡ ಅವರ ನಿವೃತ್ತಿಯಿಂದ ಈ ಕ್ಷೇತ್ರ ತೆರವಾಗಿದೆ.
ಕರ್ನಾಟಕದಿಂದ ಆಯ್ಕೆಯಾಗಿ ನಿವೃತ್ತಿಯಾಗುತ್ತಿರುವವರ ಪೈಕಿ ಬಿಜೆಪಿಯ ಇಬ್ಬರು, ಜೆಡಿಎಸ್‌ನ ಒಬ್ಬರು ಇದ್ದಾರೆ. ಆದರೆ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಬಲ ಹೆಚ್ಚಿರುವುದರಿಂದ ಮೂರವನ್ನು ರಾಜ್ಯಸಭೆಗೆ ಕಳಿಸುವ ಅವಕಾಶ ಇದೆ.
ರಾಜಕೀಯ ರಣಾಂಗಣದಲ್ಲಿ ಡಿ.ಕೆ ಶಿವಕುಮಾರ್ Vs ದೇವೇಗೌಡ ಕುಟುಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಹಾಗೂ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಕಳೆದ ಬಾರಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ದೇವೇಗೌಡ ರಾಜ್ಯಸಭೆ ಪ್ರವೇಶಿಸಿದ್ದರು.
ಮಧ್ಯಪ್ರದೇಶದಲ್ಲಿ ತರುಣ್ ಚುಗ್, ರಜನೀಶ್ ಅಗರವಾಲ್ ಹಾಗೂ ಕೊನೆ ಕ್ಷಣದಲ್ಲಿ ಮಹೇಶ್ ಕೇವತ್ ಅವರಿಗೆ ಟಿಕೆಟ್ ಘೊಷಿಸಿದೆ. ಲೋಕಸಭಾ ಮಾಜಿ ಸಂಸದ ನಟರಾಜನ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
ಕೇವತ್‌ ಅವರನ್ನು ಕಣಕ್ಕಿಳಿಸುವ ಮೂಲಕ ಮಧ್ಯಪ್ರದೇಶ ಕಣ ಮತ್ತಷ್ಟು ಜಟಿಲಗೊಂಡಿದೆ. ನಟರಾಜನ್ ಅವರನ್ನು ಕಣಕ್ಕಿಳಿಸಿದ್ದರಿಂದ ಅಸಮಾಧಾನಿತರಾಗಿರುವ ಕಾಂಗ್ರೆಸ್ ಶಾಸಕರು ಅಡ್ಡಮತದಾನ ಮಾಡುವ ಸಾಧ್ಯತೆ ಇರುವುದರಿಂದ ಅದರ ಲಾಭ ಪಡೆದುಕೊಳ್ಳಲು ಬಿಜೆಪಿ ಮುಂದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು