3:03 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಎಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರ, ದೇಶವೊಂದರ ಉನ್ನತ ಸಚಿವ ಈಗ ಡೆಲಿವರಿ ಬಾಯ್ !!

25/08/2021, 21:04

ReporterKarnataka.com

ಕಾಲ ಹೇಗೆ ಬದಲಾಗುತ್ತದೆ ಎನ್ನುವುದಕ್ಕೆ ಸೈಯದ್ ಅಹ್ಮದ್ ಸಾದತ್ ಜೀವಂತ ಉದಾಹರಣೆಯಾಗಿದ್ದಾರೆ. ಒಂದು ಸಮಯದಲ್ಲಿ ದೇಶವೊಂದರ ಸಚಿವರಾಗಿದ್ದವರು ಈಗ ಡೆಲಿವರಿ ಬಾಯ್ ಆಗಿದ್ದಾರೆ.

ಅಫ್ಘಾನಿಸ್ತಾನದ ಹಿಂದಿನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸೈಯದ್‌ ಅಹ್ಮದ್‌ ಸಾದತ್‌ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ.

ಸೈಯದ್‌ ಅವರು ಅಶ್ರಫ್‌ ಘನಿ ನೇತೃತ್ವದ ಸರ್ಕಾರದಲ್ಲಿ ಸಂವಹನ ಮತ್ತು ತಂತ್ರಜ್ಞಾನ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬಳಿಕ ಘನಿ ಜತೆ ಮನಸ್ತಾಪ ಹೊಂದಿ ಸ್ಥಾನ ತೊರೆದು ದೇಶ ಬಿಟ್ಟು ಜರ್ಮನಿಯಲ್ಲಿ ನೆಲೆಸಿದ್ದರು. ಈಗ ತಾಲಿಬಾನ್ ಸಂಪೂರ್ಣ ದೇಶದ ಮೇಲೆ ಹಿಡಿತ ಸಾಧಿಸಿದ್ದು ವಾಪಾಸಾಗುವ ಹಾಗೆಯೂ ಇಲ್ಲ.

ಈಗ ಜರ್ಮನಿಯಲ್ಲಿ ಜೀವನೋಪಾಯ ಕಂಡುಕೊಂಡಿರುವ ಅವರು ಪಿಜ್ಜಾ ಡೆಲಿವರಿ ಬಾಯ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಾಧ್ಯಮ ಸಂಸ್ಥೆ ಅಲ್‌ ಜಜೀರಾ(ಅರೇಬಿಕ್) ವರದಿ ಮಾಡಿದೆ.

ಮಾಹಿತಿಯ ಪ್ರಕಾರ, ಸೈಯದ್​ ಅಹ್ಮದ್​ ಶಾ ಸಾದತ್ ಅವರು ಆಕ್ಸ್​ಫರ್ಡ್​​ ವಿಶ್ವವಿದ್ಯಾಲಯದಿಂದ ಸಂವಹನ ಮತ್ತು ಎಲೆಕ್ಟ್ರಿಕ್​ ಎಂಜಿನಿಯರಿಂಗ್​ನಲ್ಲಿ ಎರಡು ಸ್ನಾತಕೋತ್ತರ ಪದವಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇದರ ಹೊರತಾಗಿ 13 ದೇಶಗಳ 20ಕ್ಕೂ ಹೆಚ್ಚು ಕಂಪನಿಗಳೊಂದಿಗೆ ಸಂವಹನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು