7:27 PM Sunday17 - August 2025
ಬ್ರೇಕಿಂಗ್ ನ್ಯೂಸ್
ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:…

ಇತ್ತೀಚಿನ ಸುದ್ದಿ

ಎಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರ, ದೇಶವೊಂದರ ಉನ್ನತ ಸಚಿವ ಈಗ ಡೆಲಿವರಿ ಬಾಯ್ !!

25/08/2021, 21:04

ReporterKarnataka.com

ಕಾಲ ಹೇಗೆ ಬದಲಾಗುತ್ತದೆ ಎನ್ನುವುದಕ್ಕೆ ಸೈಯದ್ ಅಹ್ಮದ್ ಸಾದತ್ ಜೀವಂತ ಉದಾಹರಣೆಯಾಗಿದ್ದಾರೆ. ಒಂದು ಸಮಯದಲ್ಲಿ ದೇಶವೊಂದರ ಸಚಿವರಾಗಿದ್ದವರು ಈಗ ಡೆಲಿವರಿ ಬಾಯ್ ಆಗಿದ್ದಾರೆ.

ಅಫ್ಘಾನಿಸ್ತಾನದ ಹಿಂದಿನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸೈಯದ್‌ ಅಹ್ಮದ್‌ ಸಾದತ್‌ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ.

ಸೈಯದ್‌ ಅವರು ಅಶ್ರಫ್‌ ಘನಿ ನೇತೃತ್ವದ ಸರ್ಕಾರದಲ್ಲಿ ಸಂವಹನ ಮತ್ತು ತಂತ್ರಜ್ಞಾನ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬಳಿಕ ಘನಿ ಜತೆ ಮನಸ್ತಾಪ ಹೊಂದಿ ಸ್ಥಾನ ತೊರೆದು ದೇಶ ಬಿಟ್ಟು ಜರ್ಮನಿಯಲ್ಲಿ ನೆಲೆಸಿದ್ದರು. ಈಗ ತಾಲಿಬಾನ್ ಸಂಪೂರ್ಣ ದೇಶದ ಮೇಲೆ ಹಿಡಿತ ಸಾಧಿಸಿದ್ದು ವಾಪಾಸಾಗುವ ಹಾಗೆಯೂ ಇಲ್ಲ.

ಈಗ ಜರ್ಮನಿಯಲ್ಲಿ ಜೀವನೋಪಾಯ ಕಂಡುಕೊಂಡಿರುವ ಅವರು ಪಿಜ್ಜಾ ಡೆಲಿವರಿ ಬಾಯ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಾಧ್ಯಮ ಸಂಸ್ಥೆ ಅಲ್‌ ಜಜೀರಾ(ಅರೇಬಿಕ್) ವರದಿ ಮಾಡಿದೆ.

ಮಾಹಿತಿಯ ಪ್ರಕಾರ, ಸೈಯದ್​ ಅಹ್ಮದ್​ ಶಾ ಸಾದತ್ ಅವರು ಆಕ್ಸ್​ಫರ್ಡ್​​ ವಿಶ್ವವಿದ್ಯಾಲಯದಿಂದ ಸಂವಹನ ಮತ್ತು ಎಲೆಕ್ಟ್ರಿಕ್​ ಎಂಜಿನಿಯರಿಂಗ್​ನಲ್ಲಿ ಎರಡು ಸ್ನಾತಕೋತ್ತರ ಪದವಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇದರ ಹೊರತಾಗಿ 13 ದೇಶಗಳ 20ಕ್ಕೂ ಹೆಚ್ಚು ಕಂಪನಿಗಳೊಂದಿಗೆ ಸಂವಹನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು