5:22 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಎಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರ, ದೇಶವೊಂದರ ಉನ್ನತ ಸಚಿವ ಈಗ ಡೆಲಿವರಿ ಬಾಯ್ !!

25/08/2021, 21:04

ReporterKarnataka.com

ಕಾಲ ಹೇಗೆ ಬದಲಾಗುತ್ತದೆ ಎನ್ನುವುದಕ್ಕೆ ಸೈಯದ್ ಅಹ್ಮದ್ ಸಾದತ್ ಜೀವಂತ ಉದಾಹರಣೆಯಾಗಿದ್ದಾರೆ. ಒಂದು ಸಮಯದಲ್ಲಿ ದೇಶವೊಂದರ ಸಚಿವರಾಗಿದ್ದವರು ಈಗ ಡೆಲಿವರಿ ಬಾಯ್ ಆಗಿದ್ದಾರೆ.

ಅಫ್ಘಾನಿಸ್ತಾನದ ಹಿಂದಿನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸೈಯದ್‌ ಅಹ್ಮದ್‌ ಸಾದತ್‌ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ.

ಸೈಯದ್‌ ಅವರು ಅಶ್ರಫ್‌ ಘನಿ ನೇತೃತ್ವದ ಸರ್ಕಾರದಲ್ಲಿ ಸಂವಹನ ಮತ್ತು ತಂತ್ರಜ್ಞಾನ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬಳಿಕ ಘನಿ ಜತೆ ಮನಸ್ತಾಪ ಹೊಂದಿ ಸ್ಥಾನ ತೊರೆದು ದೇಶ ಬಿಟ್ಟು ಜರ್ಮನಿಯಲ್ಲಿ ನೆಲೆಸಿದ್ದರು. ಈಗ ತಾಲಿಬಾನ್ ಸಂಪೂರ್ಣ ದೇಶದ ಮೇಲೆ ಹಿಡಿತ ಸಾಧಿಸಿದ್ದು ವಾಪಾಸಾಗುವ ಹಾಗೆಯೂ ಇಲ್ಲ.

ಈಗ ಜರ್ಮನಿಯಲ್ಲಿ ಜೀವನೋಪಾಯ ಕಂಡುಕೊಂಡಿರುವ ಅವರು ಪಿಜ್ಜಾ ಡೆಲಿವರಿ ಬಾಯ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಾಧ್ಯಮ ಸಂಸ್ಥೆ ಅಲ್‌ ಜಜೀರಾ(ಅರೇಬಿಕ್) ವರದಿ ಮಾಡಿದೆ.

ಮಾಹಿತಿಯ ಪ್ರಕಾರ, ಸೈಯದ್​ ಅಹ್ಮದ್​ ಶಾ ಸಾದತ್ ಅವರು ಆಕ್ಸ್​ಫರ್ಡ್​​ ವಿಶ್ವವಿದ್ಯಾಲಯದಿಂದ ಸಂವಹನ ಮತ್ತು ಎಲೆಕ್ಟ್ರಿಕ್​ ಎಂಜಿನಿಯರಿಂಗ್​ನಲ್ಲಿ ಎರಡು ಸ್ನಾತಕೋತ್ತರ ಪದವಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇದರ ಹೊರತಾಗಿ 13 ದೇಶಗಳ 20ಕ್ಕೂ ಹೆಚ್ಚು ಕಂಪನಿಗಳೊಂದಿಗೆ ಸಂವಹನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು