4:39 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಎಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರ, ದೇಶವೊಂದರ ಉನ್ನತ ಸಚಿವ ಈಗ ಡೆಲಿವರಿ ಬಾಯ್ !!

25/08/2021, 21:04

ReporterKarnataka.com

ಕಾಲ ಹೇಗೆ ಬದಲಾಗುತ್ತದೆ ಎನ್ನುವುದಕ್ಕೆ ಸೈಯದ್ ಅಹ್ಮದ್ ಸಾದತ್ ಜೀವಂತ ಉದಾಹರಣೆಯಾಗಿದ್ದಾರೆ. ಒಂದು ಸಮಯದಲ್ಲಿ ದೇಶವೊಂದರ ಸಚಿವರಾಗಿದ್ದವರು ಈಗ ಡೆಲಿವರಿ ಬಾಯ್ ಆಗಿದ್ದಾರೆ.

ಅಫ್ಘಾನಿಸ್ತಾನದ ಹಿಂದಿನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸೈಯದ್‌ ಅಹ್ಮದ್‌ ಸಾದತ್‌ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ.

ಸೈಯದ್‌ ಅವರು ಅಶ್ರಫ್‌ ಘನಿ ನೇತೃತ್ವದ ಸರ್ಕಾರದಲ್ಲಿ ಸಂವಹನ ಮತ್ತು ತಂತ್ರಜ್ಞಾನ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬಳಿಕ ಘನಿ ಜತೆ ಮನಸ್ತಾಪ ಹೊಂದಿ ಸ್ಥಾನ ತೊರೆದು ದೇಶ ಬಿಟ್ಟು ಜರ್ಮನಿಯಲ್ಲಿ ನೆಲೆಸಿದ್ದರು. ಈಗ ತಾಲಿಬಾನ್ ಸಂಪೂರ್ಣ ದೇಶದ ಮೇಲೆ ಹಿಡಿತ ಸಾಧಿಸಿದ್ದು ವಾಪಾಸಾಗುವ ಹಾಗೆಯೂ ಇಲ್ಲ.

ಈಗ ಜರ್ಮನಿಯಲ್ಲಿ ಜೀವನೋಪಾಯ ಕಂಡುಕೊಂಡಿರುವ ಅವರು ಪಿಜ್ಜಾ ಡೆಲಿವರಿ ಬಾಯ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಾಧ್ಯಮ ಸಂಸ್ಥೆ ಅಲ್‌ ಜಜೀರಾ(ಅರೇಬಿಕ್) ವರದಿ ಮಾಡಿದೆ.

ಮಾಹಿತಿಯ ಪ್ರಕಾರ, ಸೈಯದ್​ ಅಹ್ಮದ್​ ಶಾ ಸಾದತ್ ಅವರು ಆಕ್ಸ್​ಫರ್ಡ್​​ ವಿಶ್ವವಿದ್ಯಾಲಯದಿಂದ ಸಂವಹನ ಮತ್ತು ಎಲೆಕ್ಟ್ರಿಕ್​ ಎಂಜಿನಿಯರಿಂಗ್​ನಲ್ಲಿ ಎರಡು ಸ್ನಾತಕೋತ್ತರ ಪದವಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇದರ ಹೊರತಾಗಿ 13 ದೇಶಗಳ 20ಕ್ಕೂ ಹೆಚ್ಚು ಕಂಪನಿಗಳೊಂದಿಗೆ ಸಂವಹನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು