3:03 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್: ಶುಲ್ಕ ಶೇ.10ರಷ್ಟು ಏರಿಕೆ: 2 ವರ್ಷ ಹೆಚ್ಚಳ ಮಾಡಿಲ್ಲ ಎಂದು ಸಚಿವರ ಸಮರ್ಥನೆ

23/06/2022, 11:06

ಬೆಂಗಳೂರು(reporterkarnataka.com): ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ 10% ಹೆಚ್ಚಳ ಮಾಡುವ ಮೂಲಕ ಸರಕಾರ ಶಾಕ್ ನೀಡಿದೆ.

ವಿಕಾಸಸೌಧದಲ್ಲಿ ಸಚಿವ ಅಶ್ವಥ್ ನಾರಾಯಣ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷ ಸೇರುವ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಫೀಸ್ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. 45% ಲೋವರ್ ಫೀಸ್, 30% ಹೈಯರ್ ಫೀಸ್ 25% ಮ್ಯಾನೇಜ್ಮೆಂಟ್ ಸೀಟ್ ಗೆ ಹೋಗಲಿದೆ ಎಂದು ಹೇಳಿದರು.

ಎಂಜಿನಿಯರಿಂಗ್ ಕಾಲೇಜುಗಳ ಜೊತೆ ಚರ್ಚೆಯಾಗಿದೆ. ಹಲವು ವಿಚಾರ ಚರ್ಚೆಯಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚು ಫೀಸ್ ಸಂಗ್ರಹ ಮಾಡಬಾರದು. ನಿರ್ದಿಷ್ಟ ಶುಲ್ಕ ಮಾತ್ರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಕೋರ್ಡಿನೇಷನ್ ಸಿಂಪಲ್ ಮಾಡುವ ಬಗ್ಗೆ ಚರ್ಚೆ ಆಗಿದೆ ಎಂದರು.

ಈವರೆಗೂ ಸರ್ಕಾರಿ ಸೀಟುಗಳಿಗೆ ಮಾತ್ರ ಸಿಇಟಿ ನಡೆಯುತ್ತಿತ್ತು. ಖಾಸಗಿ ಸೀಟುಗಳಿಗೆ ಕಾಮಿಡ್ ಕೆ ಸೀಟು ಮಾಡಲಾಗುತ್ತಿತ್ತು. ಇದೀಗ ಸಿಇಟಿ ಮತ್ತು ಕಾಮೆಡ್ ಕೆ ಎರಡನ್ನೂ ಒಟ್ಟಿಗೆ ನಡೆಸಲು ಸಮ್ಮತಿ ನೀಡಿದ್ದಾರೆ. ಹಾಗಾಗಿ ಹೇಗೆ ಪರೀಕ್ಷೆ ನಡೆಸಬೇಕು ಅಂತ ಚರ್ಚೆ ಮಾಡಿದ್ದೇವೆ. ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪ್ರತ್ಯೇಕ ಪರೀಕ್ಷೆ ಇರಲಿದೆ. ಮುಂದಿನ ವರ್ಷದಿಂದ ಸಿಇಟಿ ಮಾತ್ರ. ಕಾಮೆಡ್-ಕೆ, ಸಿಇಟಿ ಒಟ್ಟಿಗೆ ಏಕರೂಪದ ಸಿಇಟಿ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಒಡಂಬಡಿಕೆ ಆಗಲಿದೆ ಎಂದು ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.

ಕೊರೊನಾ ಹಿನ್ನಲೆ ಎರಡು ವರ್ಷಗಳ ಕಾಲ ಶುಲ್ಕ ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ ಶುಲ್ಕ ಹೆಚ್ಚಳಕ್ಕೆ ಖಾಸಗಿ ಕಾಲೇಜುಗಳು ಬೇಡಿಕೆ ಇಟ್ಟಿದ್ದರು. 20-25% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ರು. ನಾವು 10% ಶುಲ್ಕ ಹೆಚ್ವಳಕ್ಕೆ ಅನುಮತಿ ಕೊಟ್ಟಿದ್ದೇವೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು