10:42 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್: ಶುಲ್ಕ ಶೇ.10ರಷ್ಟು ಏರಿಕೆ: 2 ವರ್ಷ ಹೆಚ್ಚಳ ಮಾಡಿಲ್ಲ ಎಂದು ಸಚಿವರ ಸಮರ್ಥನೆ

23/06/2022, 11:06

ಬೆಂಗಳೂರು(reporterkarnataka.com): ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ 10% ಹೆಚ್ಚಳ ಮಾಡುವ ಮೂಲಕ ಸರಕಾರ ಶಾಕ್ ನೀಡಿದೆ.

ವಿಕಾಸಸೌಧದಲ್ಲಿ ಸಚಿವ ಅಶ್ವಥ್ ನಾರಾಯಣ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷ ಸೇರುವ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಫೀಸ್ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. 45% ಲೋವರ್ ಫೀಸ್, 30% ಹೈಯರ್ ಫೀಸ್ 25% ಮ್ಯಾನೇಜ್ಮೆಂಟ್ ಸೀಟ್ ಗೆ ಹೋಗಲಿದೆ ಎಂದು ಹೇಳಿದರು.

ಎಂಜಿನಿಯರಿಂಗ್ ಕಾಲೇಜುಗಳ ಜೊತೆ ಚರ್ಚೆಯಾಗಿದೆ. ಹಲವು ವಿಚಾರ ಚರ್ಚೆಯಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚು ಫೀಸ್ ಸಂಗ್ರಹ ಮಾಡಬಾರದು. ನಿರ್ದಿಷ್ಟ ಶುಲ್ಕ ಮಾತ್ರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಕೋರ್ಡಿನೇಷನ್ ಸಿಂಪಲ್ ಮಾಡುವ ಬಗ್ಗೆ ಚರ್ಚೆ ಆಗಿದೆ ಎಂದರು.

ಈವರೆಗೂ ಸರ್ಕಾರಿ ಸೀಟುಗಳಿಗೆ ಮಾತ್ರ ಸಿಇಟಿ ನಡೆಯುತ್ತಿತ್ತು. ಖಾಸಗಿ ಸೀಟುಗಳಿಗೆ ಕಾಮಿಡ್ ಕೆ ಸೀಟು ಮಾಡಲಾಗುತ್ತಿತ್ತು. ಇದೀಗ ಸಿಇಟಿ ಮತ್ತು ಕಾಮೆಡ್ ಕೆ ಎರಡನ್ನೂ ಒಟ್ಟಿಗೆ ನಡೆಸಲು ಸಮ್ಮತಿ ನೀಡಿದ್ದಾರೆ. ಹಾಗಾಗಿ ಹೇಗೆ ಪರೀಕ್ಷೆ ನಡೆಸಬೇಕು ಅಂತ ಚರ್ಚೆ ಮಾಡಿದ್ದೇವೆ. ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪ್ರತ್ಯೇಕ ಪರೀಕ್ಷೆ ಇರಲಿದೆ. ಮುಂದಿನ ವರ್ಷದಿಂದ ಸಿಇಟಿ ಮಾತ್ರ. ಕಾಮೆಡ್-ಕೆ, ಸಿಇಟಿ ಒಟ್ಟಿಗೆ ಏಕರೂಪದ ಸಿಇಟಿ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಒಡಂಬಡಿಕೆ ಆಗಲಿದೆ ಎಂದು ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.

ಕೊರೊನಾ ಹಿನ್ನಲೆ ಎರಡು ವರ್ಷಗಳ ಕಾಲ ಶುಲ್ಕ ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ ಶುಲ್ಕ ಹೆಚ್ಚಳಕ್ಕೆ ಖಾಸಗಿ ಕಾಲೇಜುಗಳು ಬೇಡಿಕೆ ಇಟ್ಟಿದ್ದರು. 20-25% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ರು. ನಾವು 10% ಶುಲ್ಕ ಹೆಚ್ವಳಕ್ಕೆ ಅನುಮತಿ ಕೊಟ್ಟಿದ್ದೇವೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು