12:55 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್: ಶುಲ್ಕ ಶೇ.10ರಷ್ಟು ಏರಿಕೆ: 2 ವರ್ಷ ಹೆಚ್ಚಳ ಮಾಡಿಲ್ಲ ಎಂದು ಸಚಿವರ ಸಮರ್ಥನೆ

23/06/2022, 11:06

ಬೆಂಗಳೂರು(reporterkarnataka.com): ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ 10% ಹೆಚ್ಚಳ ಮಾಡುವ ಮೂಲಕ ಸರಕಾರ ಶಾಕ್ ನೀಡಿದೆ.

ವಿಕಾಸಸೌಧದಲ್ಲಿ ಸಚಿವ ಅಶ್ವಥ್ ನಾರಾಯಣ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷ ಸೇರುವ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಫೀಸ್ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. 45% ಲೋವರ್ ಫೀಸ್, 30% ಹೈಯರ್ ಫೀಸ್ 25% ಮ್ಯಾನೇಜ್ಮೆಂಟ್ ಸೀಟ್ ಗೆ ಹೋಗಲಿದೆ ಎಂದು ಹೇಳಿದರು.

ಎಂಜಿನಿಯರಿಂಗ್ ಕಾಲೇಜುಗಳ ಜೊತೆ ಚರ್ಚೆಯಾಗಿದೆ. ಹಲವು ವಿಚಾರ ಚರ್ಚೆಯಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚು ಫೀಸ್ ಸಂಗ್ರಹ ಮಾಡಬಾರದು. ನಿರ್ದಿಷ್ಟ ಶುಲ್ಕ ಮಾತ್ರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಕೋರ್ಡಿನೇಷನ್ ಸಿಂಪಲ್ ಮಾಡುವ ಬಗ್ಗೆ ಚರ್ಚೆ ಆಗಿದೆ ಎಂದರು.

ಈವರೆಗೂ ಸರ್ಕಾರಿ ಸೀಟುಗಳಿಗೆ ಮಾತ್ರ ಸಿಇಟಿ ನಡೆಯುತ್ತಿತ್ತು. ಖಾಸಗಿ ಸೀಟುಗಳಿಗೆ ಕಾಮಿಡ್ ಕೆ ಸೀಟು ಮಾಡಲಾಗುತ್ತಿತ್ತು. ಇದೀಗ ಸಿಇಟಿ ಮತ್ತು ಕಾಮೆಡ್ ಕೆ ಎರಡನ್ನೂ ಒಟ್ಟಿಗೆ ನಡೆಸಲು ಸಮ್ಮತಿ ನೀಡಿದ್ದಾರೆ. ಹಾಗಾಗಿ ಹೇಗೆ ಪರೀಕ್ಷೆ ನಡೆಸಬೇಕು ಅಂತ ಚರ್ಚೆ ಮಾಡಿದ್ದೇವೆ. ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪ್ರತ್ಯೇಕ ಪರೀಕ್ಷೆ ಇರಲಿದೆ. ಮುಂದಿನ ವರ್ಷದಿಂದ ಸಿಇಟಿ ಮಾತ್ರ. ಕಾಮೆಡ್-ಕೆ, ಸಿಇಟಿ ಒಟ್ಟಿಗೆ ಏಕರೂಪದ ಸಿಇಟಿ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಒಡಂಬಡಿಕೆ ಆಗಲಿದೆ ಎಂದು ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.

ಕೊರೊನಾ ಹಿನ್ನಲೆ ಎರಡು ವರ್ಷಗಳ ಕಾಲ ಶುಲ್ಕ ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ ಶುಲ್ಕ ಹೆಚ್ಚಳಕ್ಕೆ ಖಾಸಗಿ ಕಾಲೇಜುಗಳು ಬೇಡಿಕೆ ಇಟ್ಟಿದ್ದರು. 20-25% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ರು. ನಾವು 10% ಶುಲ್ಕ ಹೆಚ್ವಳಕ್ಕೆ ಅನುಮತಿ ಕೊಟ್ಟಿದ್ದೇವೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು