3:45 AM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್: ಶುಲ್ಕ ಶೇ.10ರಷ್ಟು ಏರಿಕೆ: 2 ವರ್ಷ ಹೆಚ್ಚಳ ಮಾಡಿಲ್ಲ ಎಂದು ಸಚಿವರ ಸಮರ್ಥನೆ

23/06/2022, 11:06

ಬೆಂಗಳೂರು(reporterkarnataka.com): ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ 10% ಹೆಚ್ಚಳ ಮಾಡುವ ಮೂಲಕ ಸರಕಾರ ಶಾಕ್ ನೀಡಿದೆ.

ವಿಕಾಸಸೌಧದಲ್ಲಿ ಸಚಿವ ಅಶ್ವಥ್ ನಾರಾಯಣ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷ ಸೇರುವ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಫೀಸ್ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. 45% ಲೋವರ್ ಫೀಸ್, 30% ಹೈಯರ್ ಫೀಸ್ 25% ಮ್ಯಾನೇಜ್ಮೆಂಟ್ ಸೀಟ್ ಗೆ ಹೋಗಲಿದೆ ಎಂದು ಹೇಳಿದರು.

ಎಂಜಿನಿಯರಿಂಗ್ ಕಾಲೇಜುಗಳ ಜೊತೆ ಚರ್ಚೆಯಾಗಿದೆ. ಹಲವು ವಿಚಾರ ಚರ್ಚೆಯಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚು ಫೀಸ್ ಸಂಗ್ರಹ ಮಾಡಬಾರದು. ನಿರ್ದಿಷ್ಟ ಶುಲ್ಕ ಮಾತ್ರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಕೋರ್ಡಿನೇಷನ್ ಸಿಂಪಲ್ ಮಾಡುವ ಬಗ್ಗೆ ಚರ್ಚೆ ಆಗಿದೆ ಎಂದರು.

ಈವರೆಗೂ ಸರ್ಕಾರಿ ಸೀಟುಗಳಿಗೆ ಮಾತ್ರ ಸಿಇಟಿ ನಡೆಯುತ್ತಿತ್ತು. ಖಾಸಗಿ ಸೀಟುಗಳಿಗೆ ಕಾಮಿಡ್ ಕೆ ಸೀಟು ಮಾಡಲಾಗುತ್ತಿತ್ತು. ಇದೀಗ ಸಿಇಟಿ ಮತ್ತು ಕಾಮೆಡ್ ಕೆ ಎರಡನ್ನೂ ಒಟ್ಟಿಗೆ ನಡೆಸಲು ಸಮ್ಮತಿ ನೀಡಿದ್ದಾರೆ. ಹಾಗಾಗಿ ಹೇಗೆ ಪರೀಕ್ಷೆ ನಡೆಸಬೇಕು ಅಂತ ಚರ್ಚೆ ಮಾಡಿದ್ದೇವೆ. ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪ್ರತ್ಯೇಕ ಪರೀಕ್ಷೆ ಇರಲಿದೆ. ಮುಂದಿನ ವರ್ಷದಿಂದ ಸಿಇಟಿ ಮಾತ್ರ. ಕಾಮೆಡ್-ಕೆ, ಸಿಇಟಿ ಒಟ್ಟಿಗೆ ಏಕರೂಪದ ಸಿಇಟಿ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಒಡಂಬಡಿಕೆ ಆಗಲಿದೆ ಎಂದು ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.

ಕೊರೊನಾ ಹಿನ್ನಲೆ ಎರಡು ವರ್ಷಗಳ ಕಾಲ ಶುಲ್ಕ ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ ಶುಲ್ಕ ಹೆಚ್ಚಳಕ್ಕೆ ಖಾಸಗಿ ಕಾಲೇಜುಗಳು ಬೇಡಿಕೆ ಇಟ್ಟಿದ್ದರು. 20-25% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ರು. ನಾವು 10% ಶುಲ್ಕ ಹೆಚ್ವಳಕ್ಕೆ ಅನುಮತಿ ಕೊಟ್ಟಿದ್ದೇವೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು