11:33 PM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್: ಶುಲ್ಕ ಶೇ.10ರಷ್ಟು ಏರಿಕೆ: 2 ವರ್ಷ ಹೆಚ್ಚಳ ಮಾಡಿಲ್ಲ ಎಂದು ಸಚಿವರ ಸಮರ್ಥನೆ

23/06/2022, 11:06

ಬೆಂಗಳೂರು(reporterkarnataka.com): ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ 10% ಹೆಚ್ಚಳ ಮಾಡುವ ಮೂಲಕ ಸರಕಾರ ಶಾಕ್ ನೀಡಿದೆ.

ವಿಕಾಸಸೌಧದಲ್ಲಿ ಸಚಿವ ಅಶ್ವಥ್ ನಾರಾಯಣ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷ ಸೇರುವ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಫೀಸ್ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. 45% ಲೋವರ್ ಫೀಸ್, 30% ಹೈಯರ್ ಫೀಸ್ 25% ಮ್ಯಾನೇಜ್ಮೆಂಟ್ ಸೀಟ್ ಗೆ ಹೋಗಲಿದೆ ಎಂದು ಹೇಳಿದರು.

ಎಂಜಿನಿಯರಿಂಗ್ ಕಾಲೇಜುಗಳ ಜೊತೆ ಚರ್ಚೆಯಾಗಿದೆ. ಹಲವು ವಿಚಾರ ಚರ್ಚೆಯಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚು ಫೀಸ್ ಸಂಗ್ರಹ ಮಾಡಬಾರದು. ನಿರ್ದಿಷ್ಟ ಶುಲ್ಕ ಮಾತ್ರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಕೋರ್ಡಿನೇಷನ್ ಸಿಂಪಲ್ ಮಾಡುವ ಬಗ್ಗೆ ಚರ್ಚೆ ಆಗಿದೆ ಎಂದರು.

ಈವರೆಗೂ ಸರ್ಕಾರಿ ಸೀಟುಗಳಿಗೆ ಮಾತ್ರ ಸಿಇಟಿ ನಡೆಯುತ್ತಿತ್ತು. ಖಾಸಗಿ ಸೀಟುಗಳಿಗೆ ಕಾಮಿಡ್ ಕೆ ಸೀಟು ಮಾಡಲಾಗುತ್ತಿತ್ತು. ಇದೀಗ ಸಿಇಟಿ ಮತ್ತು ಕಾಮೆಡ್ ಕೆ ಎರಡನ್ನೂ ಒಟ್ಟಿಗೆ ನಡೆಸಲು ಸಮ್ಮತಿ ನೀಡಿದ್ದಾರೆ. ಹಾಗಾಗಿ ಹೇಗೆ ಪರೀಕ್ಷೆ ನಡೆಸಬೇಕು ಅಂತ ಚರ್ಚೆ ಮಾಡಿದ್ದೇವೆ. ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪ್ರತ್ಯೇಕ ಪರೀಕ್ಷೆ ಇರಲಿದೆ. ಮುಂದಿನ ವರ್ಷದಿಂದ ಸಿಇಟಿ ಮಾತ್ರ. ಕಾಮೆಡ್-ಕೆ, ಸಿಇಟಿ ಒಟ್ಟಿಗೆ ಏಕರೂಪದ ಸಿಇಟಿ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಒಡಂಬಡಿಕೆ ಆಗಲಿದೆ ಎಂದು ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.

ಕೊರೊನಾ ಹಿನ್ನಲೆ ಎರಡು ವರ್ಷಗಳ ಕಾಲ ಶುಲ್ಕ ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ ಶುಲ್ಕ ಹೆಚ್ಚಳಕ್ಕೆ ಖಾಸಗಿ ಕಾಲೇಜುಗಳು ಬೇಡಿಕೆ ಇಟ್ಟಿದ್ದರು. 20-25% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ರು. ನಾವು 10% ಶುಲ್ಕ ಹೆಚ್ವಳಕ್ಕೆ ಅನುಮತಿ ಕೊಟ್ಟಿದ್ದೇವೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು