7:47 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

8 ದಿನ ಕಳೆದರೂ ದುರಸ್ತಿ ಕಾಣದ ಮೂಡಿಗೆರೆ ಸರಕಾರಿ ಆಸ್ಪತ್ರೆ ಡಯಾಲಿಸೀಸ್ ಯಂತ್ರ!; ಉಸಿರು ಬಿಗಿ ಹಿಡಿದ ಕಿಡ್ನಿ ರೋಗಿಗಳು!!

04/11/2021, 18:53

ಸಂತೋಷ್ ಅತ್ತಿಗೆರೆ ಮೂಡಿಗೆರೆ
info.reporterkarnataka@gmail.com

ಮೂಡಿಗೆರೆ ಎಂಜಿಎಂ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸೀಸ್ ಘಟಕದ ಯಂತ್ರ ಕೆಟ್ಟು ಹೋಗಿ 8 ದಿನಗಳು ಕಳೆದಿದ್ದು, ಇನ್ನೂ ದುರಸ್ತಿ ಭಾಗ್ಯ ಕಂಡಿಲ್ಲ. ಇದೇ ಆಸ್ಪತ್ರೆಯನ್ನು ನಂಬಿ ಬದುಕಿರುವ ಕಿಡ್ನಿ ಸಮಸ್ಯೆಯ ನೂರಾರು ರೋಗಿಗಳು ಚಿಕಿತ್ಸೆ ಇಲ್ಲದೆ ಉಸಿರು ಬಿಗಿ ಹಿಡಿದುಕೊಂಡು ಒದ್ದಾಡುತ್ತಿದ್ದಾರೆ.

ಆಸ್ಪತ್ರೆಯ ಡಯಾಲಿಸೀಸ್ ಯಂತ್ರ ಕೆಟ್ಟು ಹೋಗಿ ಬರೋಬ್ಬರಿ 8 ದಿನಗಳು ಕಳೆದಿವೆ. ಆರೋಗ್ಯ ಇಲಾಖೆ, ಸ್ಥಳೀಯ ಶಾಸಕರು ಕ್ಯಾರೇ ಮಾಡದೆ ಏನೂ ಆಗಿಲ್ಲ ಎಂಬ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಶ್ರೀಮಂತರು ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಡಯಾಲಿಸೀಸ್ ಮಾಡಿಕೊಳ್ಳುತ್ತಾರೆ. ಆದರೆ ಬಡವರು, ಕೆಳ ಮಧ್ಯಮ ವರ್ಗದವರು ಏನು ಮಾಡಬೇಕು ಸ್ವಾಮಿ? ಅವರ ಉಸಿರಿಗೆ ಬೆಲೆ ಇಲ್ವೇ?

ಇದೀಗ ಆಸ್ಪತ್ರೆಯ ಯಂತ್ರ ಕೆಟ್ಟು ಹೋಗಿರುವುದರಿಂದ ವಾರಕ್ಕೆರಡು ಮೂರು ಡಯಾಲಿಸೀಸ್ ಮಾಡಿಸುವವರಿಗೆ ವಾರಕ್ಕೊಂದು ಡಯಾಲಿಸೀಸ್ ನೀಡುತ್ತಿದ್ದಾರೆ. ಇದರಿಂದ ರೋಗಿಗಳು ದೇಹದಲ್ಲಿ ನೀರು ಹಾಗೂ ಇತರೆ ತ್ಯಾಜ್ಯಗಳು ಹೊರ ಹೋಗದೆ ಶ್ವಾಸ ಕೋಶದಲ್ಲಿ ನೀರು ತುಂಬಿ ಉಸಿರಾಡಲು ತೊಂದರೆ ಪಡುತ್ತಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು