6:40 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

8 ದಿನ ಕಳೆದರೂ ದುರಸ್ತಿ ಕಾಣದ ಮೂಡಿಗೆರೆ ಸರಕಾರಿ ಆಸ್ಪತ್ರೆ ಡಯಾಲಿಸೀಸ್ ಯಂತ್ರ!; ಉಸಿರು ಬಿಗಿ ಹಿಡಿದ ಕಿಡ್ನಿ ರೋಗಿಗಳು!!

04/11/2021, 18:53

ಸಂತೋಷ್ ಅತ್ತಿಗೆರೆ ಮೂಡಿಗೆರೆ
info.reporterkarnataka@gmail.com

ಮೂಡಿಗೆರೆ ಎಂಜಿಎಂ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸೀಸ್ ಘಟಕದ ಯಂತ್ರ ಕೆಟ್ಟು ಹೋಗಿ 8 ದಿನಗಳು ಕಳೆದಿದ್ದು, ಇನ್ನೂ ದುರಸ್ತಿ ಭಾಗ್ಯ ಕಂಡಿಲ್ಲ. ಇದೇ ಆಸ್ಪತ್ರೆಯನ್ನು ನಂಬಿ ಬದುಕಿರುವ ಕಿಡ್ನಿ ಸಮಸ್ಯೆಯ ನೂರಾರು ರೋಗಿಗಳು ಚಿಕಿತ್ಸೆ ಇಲ್ಲದೆ ಉಸಿರು ಬಿಗಿ ಹಿಡಿದುಕೊಂಡು ಒದ್ದಾಡುತ್ತಿದ್ದಾರೆ.

ಆಸ್ಪತ್ರೆಯ ಡಯಾಲಿಸೀಸ್ ಯಂತ್ರ ಕೆಟ್ಟು ಹೋಗಿ ಬರೋಬ್ಬರಿ 8 ದಿನಗಳು ಕಳೆದಿವೆ. ಆರೋಗ್ಯ ಇಲಾಖೆ, ಸ್ಥಳೀಯ ಶಾಸಕರು ಕ್ಯಾರೇ ಮಾಡದೆ ಏನೂ ಆಗಿಲ್ಲ ಎಂಬ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಶ್ರೀಮಂತರು ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಡಯಾಲಿಸೀಸ್ ಮಾಡಿಕೊಳ್ಳುತ್ತಾರೆ. ಆದರೆ ಬಡವರು, ಕೆಳ ಮಧ್ಯಮ ವರ್ಗದವರು ಏನು ಮಾಡಬೇಕು ಸ್ವಾಮಿ? ಅವರ ಉಸಿರಿಗೆ ಬೆಲೆ ಇಲ್ವೇ?

ಇದೀಗ ಆಸ್ಪತ್ರೆಯ ಯಂತ್ರ ಕೆಟ್ಟು ಹೋಗಿರುವುದರಿಂದ ವಾರಕ್ಕೆರಡು ಮೂರು ಡಯಾಲಿಸೀಸ್ ಮಾಡಿಸುವವರಿಗೆ ವಾರಕ್ಕೊಂದು ಡಯಾಲಿಸೀಸ್ ನೀಡುತ್ತಿದ್ದಾರೆ. ಇದರಿಂದ ರೋಗಿಗಳು ದೇಹದಲ್ಲಿ ನೀರು ಹಾಗೂ ಇತರೆ ತ್ಯಾಜ್ಯಗಳು ಹೊರ ಹೋಗದೆ ಶ್ವಾಸ ಕೋಶದಲ್ಲಿ ನೀರು ತುಂಬಿ ಉಸಿರಾಡಲು ತೊಂದರೆ ಪಡುತ್ತಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು