1:39 PM Saturday8 - August 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ…

ಇತ್ತೀಚಿನ ಸುದ್ದಿ

8 ದಿನ ಕಳೆದರೂ ದುರಸ್ತಿ ಕಾಣದ ಮೂಡಿಗೆರೆ ಸರಕಾರಿ ಆಸ್ಪತ್ರೆ ಡಯಾಲಿಸೀಸ್ ಯಂತ್ರ!; ಉಸಿರು ಬಿಗಿ ಹಿಡಿದ ಕಿಡ್ನಿ ರೋಗಿಗಳು!!

04/11/2021, 18:53

ಸಂತೋಷ್ ಅತ್ತಿಗೆರೆ ಮೂಡಿಗೆರೆ
info.reporterkarnataka@gmail.com

ಮೂಡಿಗೆರೆ ಎಂಜಿಎಂ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸೀಸ್ ಘಟಕದ ಯಂತ್ರ ಕೆಟ್ಟು ಹೋಗಿ 8 ದಿನಗಳು ಕಳೆದಿದ್ದು, ಇನ್ನೂ ದುರಸ್ತಿ ಭಾಗ್ಯ ಕಂಡಿಲ್ಲ. ಇದೇ ಆಸ್ಪತ್ರೆಯನ್ನು ನಂಬಿ ಬದುಕಿರುವ ಕಿಡ್ನಿ ಸಮಸ್ಯೆಯ ನೂರಾರು ರೋಗಿಗಳು ಚಿಕಿತ್ಸೆ ಇಲ್ಲದೆ ಉಸಿರು ಬಿಗಿ ಹಿಡಿದುಕೊಂಡು ಒದ್ದಾಡುತ್ತಿದ್ದಾರೆ.

ಆಸ್ಪತ್ರೆಯ ಡಯಾಲಿಸೀಸ್ ಯಂತ್ರ ಕೆಟ್ಟು ಹೋಗಿ ಬರೋಬ್ಬರಿ 8 ದಿನಗಳು ಕಳೆದಿವೆ. ಆರೋಗ್ಯ ಇಲಾಖೆ, ಸ್ಥಳೀಯ ಶಾಸಕರು ಕ್ಯಾರೇ ಮಾಡದೆ ಏನೂ ಆಗಿಲ್ಲ ಎಂಬ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಶ್ರೀಮಂತರು ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಡಯಾಲಿಸೀಸ್ ಮಾಡಿಕೊಳ್ಳುತ್ತಾರೆ. ಆದರೆ ಬಡವರು, ಕೆಳ ಮಧ್ಯಮ ವರ್ಗದವರು ಏನು ಮಾಡಬೇಕು ಸ್ವಾಮಿ? ಅವರ ಉಸಿರಿಗೆ ಬೆಲೆ ಇಲ್ವೇ?

ಇದೀಗ ಆಸ್ಪತ್ರೆಯ ಯಂತ್ರ ಕೆಟ್ಟು ಹೋಗಿರುವುದರಿಂದ ವಾರಕ್ಕೆರಡು ಮೂರು ಡಯಾಲಿಸೀಸ್ ಮಾಡಿಸುವವರಿಗೆ ವಾರಕ್ಕೊಂದು ಡಯಾಲಿಸೀಸ್ ನೀಡುತ್ತಿದ್ದಾರೆ. ಇದರಿಂದ ರೋಗಿಗಳು ದೇಹದಲ್ಲಿ ನೀರು ಹಾಗೂ ಇತರೆ ತ್ಯಾಜ್ಯಗಳು ಹೊರ ಹೋಗದೆ ಶ್ವಾಸ ಕೋಶದಲ್ಲಿ ನೀರು ತುಂಬಿ ಉಸಿರಾಡಲು ತೊಂದರೆ ಪಡುತ್ತಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು