8:49 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

8 ದಿನ ಕಳೆದರೂ ದುರಸ್ತಿ ಕಾಣದ ಮೂಡಿಗೆರೆ ಸರಕಾರಿ ಆಸ್ಪತ್ರೆ ಡಯಾಲಿಸೀಸ್ ಯಂತ್ರ!; ಉಸಿರು ಬಿಗಿ ಹಿಡಿದ ಕಿಡ್ನಿ ರೋಗಿಗಳು!!

04/11/2021, 18:53

ಸಂತೋಷ್ ಅತ್ತಿಗೆರೆ ಮೂಡಿಗೆರೆ
info.reporterkarnataka@gmail.com

ಮೂಡಿಗೆರೆ ಎಂಜಿಎಂ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸೀಸ್ ಘಟಕದ ಯಂತ್ರ ಕೆಟ್ಟು ಹೋಗಿ 8 ದಿನಗಳು ಕಳೆದಿದ್ದು, ಇನ್ನೂ ದುರಸ್ತಿ ಭಾಗ್ಯ ಕಂಡಿಲ್ಲ. ಇದೇ ಆಸ್ಪತ್ರೆಯನ್ನು ನಂಬಿ ಬದುಕಿರುವ ಕಿಡ್ನಿ ಸಮಸ್ಯೆಯ ನೂರಾರು ರೋಗಿಗಳು ಚಿಕಿತ್ಸೆ ಇಲ್ಲದೆ ಉಸಿರು ಬಿಗಿ ಹಿಡಿದುಕೊಂಡು ಒದ್ದಾಡುತ್ತಿದ್ದಾರೆ.

ಆಸ್ಪತ್ರೆಯ ಡಯಾಲಿಸೀಸ್ ಯಂತ್ರ ಕೆಟ್ಟು ಹೋಗಿ ಬರೋಬ್ಬರಿ 8 ದಿನಗಳು ಕಳೆದಿವೆ. ಆರೋಗ್ಯ ಇಲಾಖೆ, ಸ್ಥಳೀಯ ಶಾಸಕರು ಕ್ಯಾರೇ ಮಾಡದೆ ಏನೂ ಆಗಿಲ್ಲ ಎಂಬ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಶ್ರೀಮಂತರು ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಡಯಾಲಿಸೀಸ್ ಮಾಡಿಕೊಳ್ಳುತ್ತಾರೆ. ಆದರೆ ಬಡವರು, ಕೆಳ ಮಧ್ಯಮ ವರ್ಗದವರು ಏನು ಮಾಡಬೇಕು ಸ್ವಾಮಿ? ಅವರ ಉಸಿರಿಗೆ ಬೆಲೆ ಇಲ್ವೇ?

ಇದೀಗ ಆಸ್ಪತ್ರೆಯ ಯಂತ್ರ ಕೆಟ್ಟು ಹೋಗಿರುವುದರಿಂದ ವಾರಕ್ಕೆರಡು ಮೂರು ಡಯಾಲಿಸೀಸ್ ಮಾಡಿಸುವವರಿಗೆ ವಾರಕ್ಕೊಂದು ಡಯಾಲಿಸೀಸ್ ನೀಡುತ್ತಿದ್ದಾರೆ. ಇದರಿಂದ ರೋಗಿಗಳು ದೇಹದಲ್ಲಿ ನೀರು ಹಾಗೂ ಇತರೆ ತ್ಯಾಜ್ಯಗಳು ಹೊರ ಹೋಗದೆ ಶ್ವಾಸ ಕೋಶದಲ್ಲಿ ನೀರು ತುಂಬಿ ಉಸಿರಾಡಲು ತೊಂದರೆ ಪಡುತ್ತಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು