5:34 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಎರಡು ದೋಣಿಗಳ ನಡುವೆ ಭೀಕರ ಅಪಘಾತ : ನೂರಕ್ಕೂ ಅಧಿಕ ಮಂದಿ ಜಲ ಸಮಾಧಿ ?

09/09/2021, 11:44

ಜೊರ್ಹಾತ್ (Reporterkarnataka.com)

ಅಸ್ಸಾಂನಲ್ಲಿ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ನೂರಕ್ಕೂ ಅಧಿಕ ಮಂದಿ ಜಲಸಮಾಧಿಯಾಗಿರಬಹುದೆಂದು ಶಂಕಿಸಲಾಗಿದೆ.ಬ್ರಹ್ಮಪುತ್ರ ನದಿಯಲ್ಲಿ 2 ಬೋಟ್‌ಗಳು ಡಿಕ್ಕಿ ಹೊಡೆದ ಪರಿಣಾಮ ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ಜೊರ್ಹಾತ್ ಜಿಲ್ಲೆಯ ನಿಮಾತಿ ಘಾಟ್ ನಲ್ಲಿ ಈ ಘಟನೆ ನಡೆದಿದೆ. ಮಾ ಕಮಲ ದೋಣಿ ನಿಮಾತಿ ಘಾಟ್ ನಿಂದ ಮಜುಲಿಗೆ ಸಂಚರಿಸುತ್ತಿದ್ದಾಗ ಮಜುಲಿಯಿಂದ ವಾಪಸ್ಸಾಗುತ್ತಿದ್ದ ಸರ್ಕಾರಿ ಸ್ವಾಮ್ಯದ ಟ್ರಿಪ್ಕೈಗೆ ಡಿಕ್ಕಿ ಹೊಡೆದಿದೆ.

ಮೂಲಗಳ ಪ್ರಕಾರ ಈ ವರೆಗೆ ಓರ್ವ ಮಹಿಳೆಯೊಬ್ಬರ ಮೃತದೇಹವನ್ನು ಹೊರ ತೆಗೆಯಲಾಗಿದೆ ಎಂದು ಹೇಳಲಾಗುತ್ತಿದ್ದು, ಸಂವಹನ ಸಮಸ್ಯೆಯಿಂದ ಎರಡು ದೋಣಿಗಳ ನಡುವೆ ಡಿಕ್ಕಿ ಸಂಭವಿಸಿದೆ, ಡಿಕ್ಕಿಯಾದ ಕೂಡಲೇ ಒಂದು ದೋಣಿ ಮುಳುಗಿ ಹೋಗಿದೆ. ಎರಡನೇ ದೋಣಿ ಕೂಡ ಮುಳುಗುವ ಹಂತದಲ್ಲಿದ್ದಾಗ ಪೊಲೀಸರು ಹಾಗೂ ಸ್ಥಳೀಯರು ರಕ್ಷಣೆಗೆ ಧಾವಿಸಿ, ಹಲವರನ್ನು ರಕ್ಷಣೆ ಮಾಡಿದ್ದಾರೆ.

ಸಣ್ಣ ದೋಣಿಯಲ್ಲಿ 40 ಮಂದಿಯಿದ್ದು. ದೊಡ್ಡ ದೋಣಿಯಲ್ಲಿ 120 ಮಂದಿ ಜನರಿದ್ದರು ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವವರು ಜಲಸಮಾಧಿಯಾಗಿರಬಹುದು ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು