5:13 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಎರಡು ದೋಣಿಗಳ ನಡುವೆ ಭೀಕರ ಅಪಘಾತ : ನೂರಕ್ಕೂ ಅಧಿಕ ಮಂದಿ ಜಲ ಸಮಾಧಿ ?

09/09/2021, 11:44

ಜೊರ್ಹಾತ್ (Reporterkarnataka.com)

ಅಸ್ಸಾಂನಲ್ಲಿ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ನೂರಕ್ಕೂ ಅಧಿಕ ಮಂದಿ ಜಲಸಮಾಧಿಯಾಗಿರಬಹುದೆಂದು ಶಂಕಿಸಲಾಗಿದೆ.ಬ್ರಹ್ಮಪುತ್ರ ನದಿಯಲ್ಲಿ 2 ಬೋಟ್‌ಗಳು ಡಿಕ್ಕಿ ಹೊಡೆದ ಪರಿಣಾಮ ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ಜೊರ್ಹಾತ್ ಜಿಲ್ಲೆಯ ನಿಮಾತಿ ಘಾಟ್ ನಲ್ಲಿ ಈ ಘಟನೆ ನಡೆದಿದೆ. ಮಾ ಕಮಲ ದೋಣಿ ನಿಮಾತಿ ಘಾಟ್ ನಿಂದ ಮಜುಲಿಗೆ ಸಂಚರಿಸುತ್ತಿದ್ದಾಗ ಮಜುಲಿಯಿಂದ ವಾಪಸ್ಸಾಗುತ್ತಿದ್ದ ಸರ್ಕಾರಿ ಸ್ವಾಮ್ಯದ ಟ್ರಿಪ್ಕೈಗೆ ಡಿಕ್ಕಿ ಹೊಡೆದಿದೆ.

ಮೂಲಗಳ ಪ್ರಕಾರ ಈ ವರೆಗೆ ಓರ್ವ ಮಹಿಳೆಯೊಬ್ಬರ ಮೃತದೇಹವನ್ನು ಹೊರ ತೆಗೆಯಲಾಗಿದೆ ಎಂದು ಹೇಳಲಾಗುತ್ತಿದ್ದು, ಸಂವಹನ ಸಮಸ್ಯೆಯಿಂದ ಎರಡು ದೋಣಿಗಳ ನಡುವೆ ಡಿಕ್ಕಿ ಸಂಭವಿಸಿದೆ, ಡಿಕ್ಕಿಯಾದ ಕೂಡಲೇ ಒಂದು ದೋಣಿ ಮುಳುಗಿ ಹೋಗಿದೆ. ಎರಡನೇ ದೋಣಿ ಕೂಡ ಮುಳುಗುವ ಹಂತದಲ್ಲಿದ್ದಾಗ ಪೊಲೀಸರು ಹಾಗೂ ಸ್ಥಳೀಯರು ರಕ್ಷಣೆಗೆ ಧಾವಿಸಿ, ಹಲವರನ್ನು ರಕ್ಷಣೆ ಮಾಡಿದ್ದಾರೆ.

ಸಣ್ಣ ದೋಣಿಯಲ್ಲಿ 40 ಮಂದಿಯಿದ್ದು. ದೊಡ್ಡ ದೋಣಿಯಲ್ಲಿ 120 ಮಂದಿ ಜನರಿದ್ದರು ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವವರು ಜಲಸಮಾಧಿಯಾಗಿರಬಹುದು ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು