1:54 PM Monday16 - February 2026
ಬ್ರೇಕಿಂಗ್ ನ್ಯೂಸ್
ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ…

ಇತ್ತೀಚಿನ ಸುದ್ದಿ

ಈಶ್ವರಪ್ಪಗೆ ಮತ್ತೆ ಸಂಕಷ್ಟ?: ಸಂತೋಷ್ ಸಾವಿನ ಪ್ರಕರಣದ ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಗೆ ತಕರಾರು ಅರ್ಜಿ

24/08/2022, 00:08

ಬೆಂಗಳೂರು(reporterkarnataka.com): ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಪ್ರಶ್ನಿಸಿ ಸಂತೋಷ್ ಕುಟುಂಬಸ್ಥರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಉಡುಪಿ ಪೊಲೀಸರು ನಡೆಸಿದ ತನಿಖೆ ನ್ಯಾಯಯುತವಾಗಿಲ್ಲ. ಪೂರ್ವಗ್ರಹ ಪೀಡಿತರಾಗಿ ತನಿಖೆ ನಡೆಸಿದ್ದಾರೆ. ಪಾರದರ್ಶಕ ತನಿಖೆಗಾಗಿ ಸಿಬಿಐಗೆ ಪ್ರಕರಣವನ್ನು ಒಪ್ಪಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಮೃತ ಸಂತೋಷ್ ಸಹೋದರ ಪ್ರಶಾಂತ್ ಅವರು ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಏನು ಪ್ರಕರಣ?: ಬೆಳಗಾವಿಯ ಹಿಂಡಲಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ 4 ಕೋಟಿ ವೆಚ್ಚದ ಕಾಮಗಾರಿ ಬಿಲ್ ಮಂಜೂರು ಮಾಡಲು ಈಶ್ವರಪ್ಪ 40 ಪರ್ಸೆಂಟ್ ಕಮಿಷನ್‍ಗೆ ಒತ್ತಾಯಿಸಿದ್ದರು ಎಂದು ಆರೋಪಿಸಿ ಎ.11ರಂದು 

ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೃತ ಸಂತೋಷ್ ಪಾಟೀಲ ಸಂಬಂಧಿಗಳು ನೀಡಿದ ದೂರಿನಂತೆ ಸೆಕ್ಷನ್ 306, 334 ಅಡಿ ಈಶ್ವರಪ್ಪ (ಎ 1), ಬಸವರಾಜ್ (ಎ 2), ರಮೇಶ್ (ಎ 3) ವಿರುದ್ಧ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಶಾಂತ್ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಹಲವರ ಕೈವಾಡವಿದೆ. ಉಡುಪಿ ಪೊಲೀಸರು ಸರಿಯಾದ ಮಾರ್ಗದಲ್ಲಿ ತನಿಖೆ ನಡೆಸದೆ ಹಾದಿ ತಪ್ಪಿಸಿದ್ದಾರೆ. ತನಿಖೆ ವೇಳೆ ಹಲವು ರೀತಿಯ ಪ್ರಭಾವ ಬೀರಲಾಗಿದೆ. ಹೀಗಾಗಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದು ಮೃತ ಸಂತೋಷ್ ಸಹೋದರ ಪ್ರಶಾಂತ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು