12:37 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಈಶ್ವರಪ್ಪಗೆ ಮತ್ತೆ ಸಂಕಷ್ಟ?: ಸಂತೋಷ್ ಸಾವಿನ ಪ್ರಕರಣದ ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಗೆ ತಕರಾರು ಅರ್ಜಿ

24/08/2022, 00:08

ಬೆಂಗಳೂರು(reporterkarnataka.com): ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಪ್ರಶ್ನಿಸಿ ಸಂತೋಷ್ ಕುಟುಂಬಸ್ಥರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಉಡುಪಿ ಪೊಲೀಸರು ನಡೆಸಿದ ತನಿಖೆ ನ್ಯಾಯಯುತವಾಗಿಲ್ಲ. ಪೂರ್ವಗ್ರಹ ಪೀಡಿತರಾಗಿ ತನಿಖೆ ನಡೆಸಿದ್ದಾರೆ. ಪಾರದರ್ಶಕ ತನಿಖೆಗಾಗಿ ಸಿಬಿಐಗೆ ಪ್ರಕರಣವನ್ನು ಒಪ್ಪಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಮೃತ ಸಂತೋಷ್ ಸಹೋದರ ಪ್ರಶಾಂತ್ ಅವರು ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಏನು ಪ್ರಕರಣ?: ಬೆಳಗಾವಿಯ ಹಿಂಡಲಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ 4 ಕೋಟಿ ವೆಚ್ಚದ ಕಾಮಗಾರಿ ಬಿಲ್ ಮಂಜೂರು ಮಾಡಲು ಈಶ್ವರಪ್ಪ 40 ಪರ್ಸೆಂಟ್ ಕಮಿಷನ್‍ಗೆ ಒತ್ತಾಯಿಸಿದ್ದರು ಎಂದು ಆರೋಪಿಸಿ ಎ.11ರಂದು 

ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೃತ ಸಂತೋಷ್ ಪಾಟೀಲ ಸಂಬಂಧಿಗಳು ನೀಡಿದ ದೂರಿನಂತೆ ಸೆಕ್ಷನ್ 306, 334 ಅಡಿ ಈಶ್ವರಪ್ಪ (ಎ 1), ಬಸವರಾಜ್ (ಎ 2), ರಮೇಶ್ (ಎ 3) ವಿರುದ್ಧ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಶಾಂತ್ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಹಲವರ ಕೈವಾಡವಿದೆ. ಉಡುಪಿ ಪೊಲೀಸರು ಸರಿಯಾದ ಮಾರ್ಗದಲ್ಲಿ ತನಿಖೆ ನಡೆಸದೆ ಹಾದಿ ತಪ್ಪಿಸಿದ್ದಾರೆ. ತನಿಖೆ ವೇಳೆ ಹಲವು ರೀತಿಯ ಪ್ರಭಾವ ಬೀರಲಾಗಿದೆ. ಹೀಗಾಗಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದು ಮೃತ ಸಂತೋಷ್ ಸಹೋದರ ಪ್ರಶಾಂತ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು