7:17 AM Tuesday9 - September 2025
ಬ್ರೇಕಿಂಗ್ ನ್ಯೂಸ್
ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5…

ಇತ್ತೀಚಿನ ಸುದ್ದಿ

ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಕಾಂತೇಶ್

01/05/2024, 17:00

ಬೆಂಗಳೂರು(reporterkatnataka.com):ಮಾಜಿ ಉಪ ಮುಖ್ಯಮಂತ್ರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡುಕೋರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಕೆ.ಇ.ಕಾಂತೇಶ್ ಅವರು ತಮ್ಮ ವಿರುದ್ಧ ಮಾನಹಾನಿ ವರದಿ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ನಿಂದ ಮಾಧ್ಯಮಗಳ ವಿರುದ್ಧ ಮಧ್ಯಂತರ ತಡೆಯಾಜ್ಞೆ ತಂದಿದ್ದಾರೆ.

ಕಾಂತೇಶ್ ಅವರು ಸಲ್ಲಿಸಿದ್ದ ದಾವೆಯ ವಿಚಾರಣೆ ನಡೆಸಿದ ಬೆಂಗಳೂರಿನ 6ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ ಈ ಪ್ರತಿಬಂಧಕಾಜ್ಞೆ ನೀಡಿದರು.
ಕೆ.ಇ.ಕಾಂತೇಶ್ ಅವರು 50 ಮಾಧ್ಯಮಗಳ ಹೆಸರು ಉಲ್ಲೇಖಿಸಿದ್ದು, ಯಾರೇ ಆದರೂ ದೂರಿನಲ್ಲಿ ಉಲ್ಲೇಖಿಸಿದ ರೀತಿ ಮಾನಹಾನಿ ಮಾಡುವಂತಹ ಮಾಹಿತಿ ಪ್ರಸಾರ ಮಾಡಬಾರದು ಎಂದು ಕೋರಿದ್ದರು.
ಅಶ್ಲೀಲ ವಿಡಿಯೊ ಪ್ರಸಾರ, ಫೋಟೋ, ವರದಿ ಮುದ್ರಣ, ಅವುಗಳ ಹಂಚಿಕೆ ಮಾಡಬಾರದು. ಇದಕ್ಕೆ ಪ್ರತಿಬಂಧಕಾಜ್ಞೆ ನೀಡಲಾಗಿದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.
ಇದರಂತೆ, ಪ್ರತಿವಾದಿಗಳಿಗೆ ನೋಟಿಸ್, ಸಮನ್ಸ್ ಜಾರಿ ಮಾಡಿದ ನ್ಯಾಯಾಲಯವು ಈ ದಾವೆಯ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿದೆ.
*ದಾವೆಯಲ್ಲಿ ಏನಿದೆ?: ಕೆ. ಇ. ಕಾಂತೇಶ್ ಅವರ ಪರವಾಗಿ ವಕೀಲ ಎಂ ವಿನೋದ್ ಕುಮಾರ್‌ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು. ಪ್ರತಿವಾದಿಗಳ ಸ್ಥಾನದಲ್ಲಿರುವ ಇಂಟರ್ನೆಟ್, ಟಿವಿ ಮಾಧ್ಯಮ, ಪತ್ರಿಕೆಗಳಲ್ಲಿ ದೂರುದಾರರ ವಿರುದ್ಧ ಆಕ್ಷೇಪಾರ್ಹವಾದ ಸುದ್ದಿ ಪ್ರಸಾರವಾಗುತ್ತಿದೆ. ಈ ಮೂಲಕ ದೂರುದಾರರ ವರ್ಚಸ್ಸು ಹಾಳು ಮಾಡಲು ಪ್ರಯತ್ನಿಸಲಾಗುತ್ತಿದೆ. ಲೋಕಸಭಾ ಚುನಾವಣೆ ರಾಜಕೀಯವಾಗಿ ಮಹತ್ವ ಪಡೆದುಕೊಂಡ ಸಂದರ್ಭವಾದ ಕಾರಣ, ದೂರುದಾರರಿಗೆ ಮಾನಹಾನಿಯಿಂದ ರಕ್ಷಣೆ ಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು