7:07 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಕಾಂತೇಶ್

01/05/2024, 17:00

ಬೆಂಗಳೂರು(reporterkatnataka.com):ಮಾಜಿ ಉಪ ಮುಖ್ಯಮಂತ್ರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡುಕೋರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಕೆ.ಇ.ಕಾಂತೇಶ್ ಅವರು ತಮ್ಮ ವಿರುದ್ಧ ಮಾನಹಾನಿ ವರದಿ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ನಿಂದ ಮಾಧ್ಯಮಗಳ ವಿರುದ್ಧ ಮಧ್ಯಂತರ ತಡೆಯಾಜ್ಞೆ ತಂದಿದ್ದಾರೆ.

ಕಾಂತೇಶ್ ಅವರು ಸಲ್ಲಿಸಿದ್ದ ದಾವೆಯ ವಿಚಾರಣೆ ನಡೆಸಿದ ಬೆಂಗಳೂರಿನ 6ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ ಈ ಪ್ರತಿಬಂಧಕಾಜ್ಞೆ ನೀಡಿದರು.
ಕೆ.ಇ.ಕಾಂತೇಶ್ ಅವರು 50 ಮಾಧ್ಯಮಗಳ ಹೆಸರು ಉಲ್ಲೇಖಿಸಿದ್ದು, ಯಾರೇ ಆದರೂ ದೂರಿನಲ್ಲಿ ಉಲ್ಲೇಖಿಸಿದ ರೀತಿ ಮಾನಹಾನಿ ಮಾಡುವಂತಹ ಮಾಹಿತಿ ಪ್ರಸಾರ ಮಾಡಬಾರದು ಎಂದು ಕೋರಿದ್ದರು.
ಅಶ್ಲೀಲ ವಿಡಿಯೊ ಪ್ರಸಾರ, ಫೋಟೋ, ವರದಿ ಮುದ್ರಣ, ಅವುಗಳ ಹಂಚಿಕೆ ಮಾಡಬಾರದು. ಇದಕ್ಕೆ ಪ್ರತಿಬಂಧಕಾಜ್ಞೆ ನೀಡಲಾಗಿದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.
ಇದರಂತೆ, ಪ್ರತಿವಾದಿಗಳಿಗೆ ನೋಟಿಸ್, ಸಮನ್ಸ್ ಜಾರಿ ಮಾಡಿದ ನ್ಯಾಯಾಲಯವು ಈ ದಾವೆಯ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿದೆ.
*ದಾವೆಯಲ್ಲಿ ಏನಿದೆ?: ಕೆ. ಇ. ಕಾಂತೇಶ್ ಅವರ ಪರವಾಗಿ ವಕೀಲ ಎಂ ವಿನೋದ್ ಕುಮಾರ್‌ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು. ಪ್ರತಿವಾದಿಗಳ ಸ್ಥಾನದಲ್ಲಿರುವ ಇಂಟರ್ನೆಟ್, ಟಿವಿ ಮಾಧ್ಯಮ, ಪತ್ರಿಕೆಗಳಲ್ಲಿ ದೂರುದಾರರ ವಿರುದ್ಧ ಆಕ್ಷೇಪಾರ್ಹವಾದ ಸುದ್ದಿ ಪ್ರಸಾರವಾಗುತ್ತಿದೆ. ಈ ಮೂಲಕ ದೂರುದಾರರ ವರ್ಚಸ್ಸು ಹಾಳು ಮಾಡಲು ಪ್ರಯತ್ನಿಸಲಾಗುತ್ತಿದೆ. ಲೋಕಸಭಾ ಚುನಾವಣೆ ರಾಜಕೀಯವಾಗಿ ಮಹತ್ವ ಪಡೆದುಕೊಂಡ ಸಂದರ್ಭವಾದ ಕಾರಣ, ದೂರುದಾರರಿಗೆ ಮಾನಹಾನಿಯಿಂದ ರಕ್ಷಣೆ ಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು