10:29 PM Saturday6 - December 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ…

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಮುಖ್ಯ ನ್ಯಾಯಮೂರ್ತಿ ಭೇಟಿ; ಪೂರಕವಾಗಿ ಸ್ಪಂದನೆ

06/12/2025, 22:29

ಮಂಗಳೂರು(reporterkarnataka.com): ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹಾಗೂ ಮಂಗಳೂರಿನಲ್ಲಿ ಸಂಚಾರ ಹೈಕೋರ್ಟ್ ಪೀಠ ಸ್ಥಾಪನೆ ಉದ್ದೇಶಕ್ಕಾಗಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ನಿಯೋಗ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಮೂರ್ತಿಗಳಾದ ಗೌರವಾನ್ವಿತ ವಿಭು ಬಖ್ರು ರವರನ್ನು ಉಡುಪಿ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿಯಾಗಿ ಯಾಗಿ ಮನವಿ ಸಲ್ಲಿಸಲಾಯಿತು.


ಹೋರಾಟ ಸಮಿತಿಯ ಸಂಚಾಲಕರು ವಿಧಾನ ಪರಿಷತ್ ನ ಸದಸ್ಯ ಐವನ್ ಡಿಸೋಜ ಅವರು ಮನವಿಯನ್ನು ಸಲ್ಲಿಸಿ ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಬಹಳ ಮುಖ್ಯವಾಗಿದ್ದು, ಇದರಿಂದ ಸಾಮಾನ್ಯ ಜನರು ದೂರದ ಬೆಂಗಳೂರಿಗೆ ಹೋಗಿ ಕಾನೂನು ಹೋರಾಟದಲ್ಲಿ ತೊಡಗಿಸಿಕೊಳ್ಳಲು ಬಹಳ ಕಷ್ಟವಾಗುತ್ತದೆ. ಮಳೆಗಾಲದ ಸಂದರ್ಭದಲ್ಲಿ ದೂರದ ಬೆಂಗಳೂರಿನ ಸಂಪರ್ಕ ಆಗಾಗ ಕಡಿತಗೊಳ್ಳುವುದರಿಂದ ಜನರು ಹೈಕೋರ್ಟಿಗೆ ಸಂಚರಿಸಲು ಕಷ್ಟವನ್ನು ಅನುಭವಿಸಬೇಕಾಗಿದ್ದು ಅಲ್ಲದೆ ಕರಾವಳಿ ಭಾಗ ಉಡುಪಿ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ದಾವೆಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದ್ದು ಇದರಿಂದ ಈ ಭಾಗದ ಜನರಿಗೆ ಬಹಳ ತೊಂದರೆಯಾಗುತ್ತಿರುವುದರಿಂದ, ಅಲ್ಲದೆ ರಾಜ್ಯದ ಮುಖ್ಯಮಂತ್ರಿಗಳು ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಲವನ್ನು ತೋರಿಸಿರುವುದರಿಂದ, ಮೊದಲಿಗೆ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪಿಸಲು ಒಪ್ಪಿಗೆ ನೀಡಬೇಕೆಂದು ವಿನಂತಿಸಿದರು.
ಈ ಮನವಿಗೆ ಪೂರಕವಾಗಿ ಸ್ಪಂದಿಸಿದ ಮುಖ್ಯ ನ್ಯಾಯಮೂರ್ತಿಗಳು ತಮ್ಮ ಮನವಿಯ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸಮಿತಿಯ ನಿಯೋಗದಲ್ಲಿ ಮಂಗಳೂರು ವಕೀಲ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್‍. ವಿ., ಮಂಗಳೂರಿನ ಪ್ರಧಾನ ಜಿಲ್ಲಾ ಸರಕಾರಿ ವಕೀಲರಾದ ಎಂ. ಪಿ. ನರೋನ್ಹ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್., ಉಡುಪಿ ವಕೀಲರ ಸಂಘದ ಅಧ್ಯಕ್ಷರ ರೊನಾಲ್ಡ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು