1:46 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ತೇಜಸ್ವಿ ಪ್ರತಿಷ್ಠಾನದ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯ: ಪ್ರತಿಷ್ಠಾನದ ನೂತನ ಅಧ್ಯಕ್ಷ ಡಾ.ಪ್ರದೀಪ ಕೆಂಜಿಗೆ ಅಭಿಮತ

26/11/2025, 12:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು:ತೇಜಸ್ವಿ ಪ್ರತಿಷ್ಠಾನದ ಬೆಳವಣಿಗೆಗೆ ಪ್ರಾರಂಭದಿಂದಲೂ ಹಲವರು ಸಹಕಾರ ನೀಡುತ್ತಾ ಬಂದಿದ್ದು ಮುಂದೆಯೂ ಕೂಡ ಎಲ್ಲರ ಸಹಕಾರ ಅಗತ್ಯ ಎಂದು ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನೂತನ ಅಧ್ಯಕ್ಷ ಡಾ.ಪ್ರದೀಪ ಕೆಂಜಿಗೆ ಹೇಳಿದರು.
ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
೨೦೦೭ರಲ್ಲಿ ವಿಸ್ಮಯ ಪ್ರತಿಷ್ಠಾನದ ಎಂಬ ಹೆಸರಿನಿಂದ ಪ್ರಾರಂಭವಾಗಿ ಆ ನಂತರದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಜೀವವೈವಿದ್ಯ ಸಂಶೋಧನಾ ಕೇಂದ್ರ ಎಂದಾಯಿತು. ಪ್ರಸ್ತುತ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನವಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿಕೊಂಡು ಬರುತ್ತಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಮಾತನಾಡಿ, ತೇಜಸ್ವಿ ಪ್ರತಿಷ್ಠಾನದ ದ್ಯೇಯ್ಯೋದ್ದೇಶಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸಿಕೊಂಡು ಬರಲಾಗುತ್ತಿದೆ. ಪ್ರತಿಷ್ಠಾನವು ನಿರಂತರ ಚಟುವಟಿಕೆಗಳ ಮೂಲಕ ಜ್ಞಾನಾಸಕ್ತರನ್ನು ತಲುಪುವಲ್ಲಿ ಸಕ್ರಿಯವಾಗಿದೆ ಎಂದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ಅವರು, ತೇಜಸ್ತಿ ಪ್ರತಿಷ್ಠಾನದ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿ, ನೂತನ ತಂಡದ ಮಾರ್ಗದರ್ಶನದಲ್ಲಿ ಇನ್ನಷ್ಟು ಸಕ್ರಿಯ ಹಾಗೂ ಸಾರ್ಥಕ ಕಾರ್ಯಕ್ರಮಗಳು ನಡೆಯಲಿ. ಜಿಲ್ಲಾಡಳಿತ ಪ್ರತಿಷ್ಠಾನದ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುತ್ತದೆ ಎಂದರು.
ಈ ಸಂದರ್ಭದಲ್ಲಿ ತೇಜಸ್ವಿ ಪ್ರತಿಷ್ಠಾನದ ನೂತನ ಅಧ್ಯಕ್ಷರಾದ ಡಾ.ಪ್ರದೀಪ ಕೆಂಜಿಗೆ ಸದಸ್ಯರಾದ ರಾಘವೇಂದ್ರ, ರವೀಶ್ ಕ್ಯಾತನಬೀಡು, ರುದ್ರಸ್ವಾಮಿ ಅವರನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಅಭಿನಂದಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಎಲೆಕ್ಟಿçÃಷಿಯನ್ ಶ್ರೀನಿವಾಸ್, ನವದೀಪ್, ಪೂರ್ಣೇಶ್, ಶಾಮಿಲಿ, ಮಲ್ಲಿಕ್, ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಕೀಟತಜ್ಞ ಡಾ.ಅವಿನಾಶ್, ಲೇಖಕ ಪೂರ್ಣೇಶ್ ಮತ್ತಾವರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು