1:50 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ತೇಜಸ್ವಿ ಪ್ರತಿಷ್ಠಾನದ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯ: ಪ್ರತಿಷ್ಠಾನದ ನೂತನ ಅಧ್ಯಕ್ಷ ಡಾ.ಪ್ರದೀಪ ಕೆಂಜಿಗೆ ಅಭಿಮತ

26/11/2025, 12:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು:ತೇಜಸ್ವಿ ಪ್ರತಿಷ್ಠಾನದ ಬೆಳವಣಿಗೆಗೆ ಪ್ರಾರಂಭದಿಂದಲೂ ಹಲವರು ಸಹಕಾರ ನೀಡುತ್ತಾ ಬಂದಿದ್ದು ಮುಂದೆಯೂ ಕೂಡ ಎಲ್ಲರ ಸಹಕಾರ ಅಗತ್ಯ ಎಂದು ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನೂತನ ಅಧ್ಯಕ್ಷ ಡಾ.ಪ್ರದೀಪ ಕೆಂಜಿಗೆ ಹೇಳಿದರು.
ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
೨೦೦೭ರಲ್ಲಿ ವಿಸ್ಮಯ ಪ್ರತಿಷ್ಠಾನದ ಎಂಬ ಹೆಸರಿನಿಂದ ಪ್ರಾರಂಭವಾಗಿ ಆ ನಂತರದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಜೀವವೈವಿದ್ಯ ಸಂಶೋಧನಾ ಕೇಂದ್ರ ಎಂದಾಯಿತು. ಪ್ರಸ್ತುತ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನವಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿಕೊಂಡು ಬರುತ್ತಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಮಾತನಾಡಿ, ತೇಜಸ್ವಿ ಪ್ರತಿಷ್ಠಾನದ ದ್ಯೇಯ್ಯೋದ್ದೇಶಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸಿಕೊಂಡು ಬರಲಾಗುತ್ತಿದೆ. ಪ್ರತಿಷ್ಠಾನವು ನಿರಂತರ ಚಟುವಟಿಕೆಗಳ ಮೂಲಕ ಜ್ಞಾನಾಸಕ್ತರನ್ನು ತಲುಪುವಲ್ಲಿ ಸಕ್ರಿಯವಾಗಿದೆ ಎಂದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ಅವರು, ತೇಜಸ್ತಿ ಪ್ರತಿಷ್ಠಾನದ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿ, ನೂತನ ತಂಡದ ಮಾರ್ಗದರ್ಶನದಲ್ಲಿ ಇನ್ನಷ್ಟು ಸಕ್ರಿಯ ಹಾಗೂ ಸಾರ್ಥಕ ಕಾರ್ಯಕ್ರಮಗಳು ನಡೆಯಲಿ. ಜಿಲ್ಲಾಡಳಿತ ಪ್ರತಿಷ್ಠಾನದ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುತ್ತದೆ ಎಂದರು.
ಈ ಸಂದರ್ಭದಲ್ಲಿ ತೇಜಸ್ವಿ ಪ್ರತಿಷ್ಠಾನದ ನೂತನ ಅಧ್ಯಕ್ಷರಾದ ಡಾ.ಪ್ರದೀಪ ಕೆಂಜಿಗೆ ಸದಸ್ಯರಾದ ರಾಘವೇಂದ್ರ, ರವೀಶ್ ಕ್ಯಾತನಬೀಡು, ರುದ್ರಸ್ವಾಮಿ ಅವರನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಅಭಿನಂದಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಎಲೆಕ್ಟಿçÃಷಿಯನ್ ಶ್ರೀನಿವಾಸ್, ನವದೀಪ್, ಪೂರ್ಣೇಶ್, ಶಾಮಿಲಿ, ಮಲ್ಲಿಕ್, ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಕೀಟತಜ್ಞ ಡಾ.ಅವಿನಾಶ್, ಲೇಖಕ ಪೂರ್ಣೇಶ್ ಮತ್ತಾವರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು