2:29 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ತೇಜಸ್ವಿ ಪ್ರತಿಷ್ಠಾನದ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯ: ಪ್ರತಿಷ್ಠಾನದ ನೂತನ ಅಧ್ಯಕ್ಷ ಡಾ.ಪ್ರದೀಪ ಕೆಂಜಿಗೆ ಅಭಿಮತ

26/11/2025, 12:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು:ತೇಜಸ್ವಿ ಪ್ರತಿಷ್ಠಾನದ ಬೆಳವಣಿಗೆಗೆ ಪ್ರಾರಂಭದಿಂದಲೂ ಹಲವರು ಸಹಕಾರ ನೀಡುತ್ತಾ ಬಂದಿದ್ದು ಮುಂದೆಯೂ ಕೂಡ ಎಲ್ಲರ ಸಹಕಾರ ಅಗತ್ಯ ಎಂದು ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನೂತನ ಅಧ್ಯಕ್ಷ ಡಾ.ಪ್ರದೀಪ ಕೆಂಜಿಗೆ ಹೇಳಿದರು.
ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
೨೦೦೭ರಲ್ಲಿ ವಿಸ್ಮಯ ಪ್ರತಿಷ್ಠಾನದ ಎಂಬ ಹೆಸರಿನಿಂದ ಪ್ರಾರಂಭವಾಗಿ ಆ ನಂತರದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಜೀವವೈವಿದ್ಯ ಸಂಶೋಧನಾ ಕೇಂದ್ರ ಎಂದಾಯಿತು. ಪ್ರಸ್ತುತ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನವಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿಕೊಂಡು ಬರುತ್ತಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಮಾತನಾಡಿ, ತೇಜಸ್ವಿ ಪ್ರತಿಷ್ಠಾನದ ದ್ಯೇಯ್ಯೋದ್ದೇಶಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸಿಕೊಂಡು ಬರಲಾಗುತ್ತಿದೆ. ಪ್ರತಿಷ್ಠಾನವು ನಿರಂತರ ಚಟುವಟಿಕೆಗಳ ಮೂಲಕ ಜ್ಞಾನಾಸಕ್ತರನ್ನು ತಲುಪುವಲ್ಲಿ ಸಕ್ರಿಯವಾಗಿದೆ ಎಂದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ಅವರು, ತೇಜಸ್ತಿ ಪ್ರತಿಷ್ಠಾನದ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿ, ನೂತನ ತಂಡದ ಮಾರ್ಗದರ್ಶನದಲ್ಲಿ ಇನ್ನಷ್ಟು ಸಕ್ರಿಯ ಹಾಗೂ ಸಾರ್ಥಕ ಕಾರ್ಯಕ್ರಮಗಳು ನಡೆಯಲಿ. ಜಿಲ್ಲಾಡಳಿತ ಪ್ರತಿಷ್ಠಾನದ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುತ್ತದೆ ಎಂದರು.
ಈ ಸಂದರ್ಭದಲ್ಲಿ ತೇಜಸ್ವಿ ಪ್ರತಿಷ್ಠಾನದ ನೂತನ ಅಧ್ಯಕ್ಷರಾದ ಡಾ.ಪ್ರದೀಪ ಕೆಂಜಿಗೆ ಸದಸ್ಯರಾದ ರಾಘವೇಂದ್ರ, ರವೀಶ್ ಕ್ಯಾತನಬೀಡು, ರುದ್ರಸ್ವಾಮಿ ಅವರನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಅಭಿನಂದಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಎಲೆಕ್ಟಿçÃಷಿಯನ್ ಶ್ರೀನಿವಾಸ್, ನವದೀಪ್, ಪೂರ್ಣೇಶ್, ಶಾಮಿಲಿ, ಮಲ್ಲಿಕ್, ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಕೀಟತಜ್ಞ ಡಾ.ಅವಿನಾಶ್, ಲೇಖಕ ಪೂರ್ಣೇಶ್ ಮತ್ತಾವರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು