10:14 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್

01/06/2026, 15:25

ಬೆಂಗಳೂರು(reporterkarnataka.com): ವಸತಿ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಬಂಧಿಸಿದ ಆಡಿಯೋ ಲೀಕ್ ವಿವಾದವೊಂದು ಕಾಂಗ್ರೆಸ್ ಹೈಕಮಾಂಡ್ ಮೆಟ್ಟಿಲೇರಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ.


ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಸಂದರ್ಭದಲ್ಲಿ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಒಳಸಂಚು ನಡೆಸಿದ ಹಾಗೂ ಎಸ್‌ಡಿಪಿಐ (SDPI) ಪಕ್ಷಕ್ಕೆ ಪರೋಕ್ಷ ಬೆಂಬಲ ನೀಡಿದ ಆರೋಪ ಜಮೀರ್ ಅವರ ಮೇಲಿದೆ.

*ಆಡಿಯೋದಲ್ಲಿ ಏನಿದೆ?:*
ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ನಾಯಕರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ್ದಕ್ಕೆ ಅಲ್ಪಸಂಖ್ಯಾತ ನಾಯಕರು ಅಸಮಾಧಾನಗೊಂಡಿದ್ದರು. ಈ ನಡುವೆ ಲೀಕ್ ಆಗಿರುವ ಆಡಿಯೋದಲ್ಲಿ, ಅಧಿಕೃತ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಸೋಲಿಸಲು ಮತ್ತು ಪಕ್ಷದ ಆಂತರಿಕ ಕಾರ್ಯತಂತ್ರಗಳನ್ನು ಹಳಿತಪ್ಪಿಸಲು ನಡೆದ ಚರ್ಚೆಗಳು ಅಡಗಿವೆ ಎನ್ನಲಾಗಿದೆ.
ಆಡಿಯೋದಲ್ಲಿ ಮಹಮ್ಮದ್ಸಿರಾಜ್‌ ಅವರೊಂದಿಗೆ ಮುಸ್ಲಿಂ ಮತದಾರರನ್ನು ನೀವಾಗಿಯೇ ಕರೆತರಬೇಡಿ ಎಂದಿದ್ದಾರೆ. ಬಂದರೂ ಅವರಿಗೆ ಕಾಂಗ್ರೆಸ್‌ಗೆ ವೋಟ್ ಹಾಕಿ ರೂಡಿ, ಅವರಿಗೆ ಪಕ್ಷೇತರರಿಗೆ ವೋಟ್‌ ಹಾಕಲು ಹೇಳಿ ಎಂದಿದ್ದಾರೆ.
ಈ ಸಂವೇದನಾಶೀಲ ಆಡಿಯೋ ರೆಕಾರ್ಡಿಂಗ್‌ಗಳು ಸದ್ಯ ಕಾಂಗ್ರೆಸ್ ಹೈಕಮಾಂಡ್ ಕೈಸೇರಿದ್ದು, ನವದೆಹಲಿ ಮಟ್ಟದಲ್ಲಿ ಗಂಭೀರ ಪರಿಶೀಲನೆ ಆರಂಭವಾಗಿದೆ.
ಈ ವಿವಾದದ ಕುರಿತು ಮಾಧ್ಯಮಗಳಿಗೆ ವಿಶೇಷ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.

*ರಾಜಕೀಯ ಪ್ರೇರಿತ:* ಈ ಆಡಿಯೋ ಲೀಕ್ ಹಗರಣವು ಸಂಪೂರ್ಣ ರಾಜಕೀಯ ಪ್ರೇರಿತವಾಗಿದ್ದು, ತಾವು ಯಾವಾಗಲೂ ಪಕ್ಷದ ಹಿತಾಸಕ್ತಿಗಾಗಿಯೇ ಕೆಲಸ ಮಾಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಶಿಸ್ತುಕ್ರಮ ಕೈಗೊಳ್ಳಲಿದೆಯೇ? ಇಬ್ಬರು ನಾಯಕರ ಅಮಾನತು: ಈ ಒಳಸಂಚಿನ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಈಗಾಗಲೇ ತನ್ನ ಇಬ್ಬರು ಹಿರಿಯ ಅಲ್ಪಸಂಖ್ಯಾತ ನಾಯಕರಾದ ಅಬ್ದುಲ್ ಜಬ್ಬಾರ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ವಿರುದ್ಧ ಕಠಿಣ ಕ್ರಮ ಕೈಗೊಂಡು ಪಕ್ಷದಿಂದ ಹೊರಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು