1:26 AM Thursday8 - January 2026
ಬ್ರೇಕಿಂಗ್ ನ್ಯೂಸ್
ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಹಣದ ಆಸೆಗೆ ಅಪ್ರಾಪ್ತ ವಯಸ್ಸಿನ ಪುತ್ರಿಯ ವೇಶ್ಯಾವಾಟಿಕೆಗೆ ಬಳಸಿದ ದುಷ್ಟ ತಂದೆ: ಆರೋಪಿಗಳ ಬಂಧನ

07/01/2026, 22:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಣದ ಆಸೆಗೆ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳನ್ನು ವೇಶ್ಯಾವಾಟಿಕೆಗೆ ನೂಕಿದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರು ಹೋಬಳಿಯ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ.
ತಾಯಿ ಇಲ್ಲದ 16 ವರ್ಷದ ಬಾಲಕಿಯನ್ನು ತಂದೆ ಗಿರೀಶ್ ಹಾಗೂ ಅಜ್ಜಿ ನಾಗರತ್ನ ಸೇರಿ ಹಣಕ್ಕಾಗಿ ವೇಶ್ಯಾವಾಟಿಕೆಗೆ ಬಳಸಿಕೊಂಡ ಆರೋಪ ಕೇಳಿಬಂದಿದೆ. ಆರೋಪದ ಪ್ರಕಾರ, ಭರತ್ ಶೆಟ್ಟಿ ಎಂಬ ವ್ಯಕ್ತಿಯೊಂದಿಗೆ ಬಾಲಕಿಯನ್ನು ಮಂಗಳೂರಿಗೆ ಕರೆದೊಯ್ದು, 6 ದಿನಗಳ ಕಾಲ 10ಕ್ಕೂ ಹೆಚ್ಚು ಜನರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಲಾಗಿದೆ ಎನ್ನಲಾಗಿದೆ.
ಪಿರಿಯಡ್ಸ್ ಅವಧಿಯಲ್ಲಿಯೂ ಬಾಲಕಿಯನ್ನು ಬಲವಂತವಾಗಿ ಲೈಂಗಿಕ ಕೃತ್ಯಕ್ಕೆ ಒಳಪಡಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ. ಮಂಗಳೂರಿನಿಂದ ಊರಿಗೆ ಮರಳಿದ ಬಳಿಕ ನೊಂದ ಬಾಲಕಿ ತನ್ನ ಚಿಕ್ಕಪ್ಪನಿಗೆ ಹಾಗೂ ಅತ್ತೆಗೆ ವಿಷಯ ತಿಳಿಸಿದ್ದು, ಅವರ ಮೂಲಕ ಬೀರೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ದೂರು ದಾಖಲಿಸಿಕೊಂಡ ಬೀರೂರು ಪೊಲೀಸರು ಬಾಲಕಿಯ ತಂದೆ ಗಿರೀಶ್, ಅಜ್ಜಿ ನಾಗರತ್ನ ಹಾಗೂ ಭರತ್ ಶೆಟ್ಟಿ ಸೇರಿದಂತೆ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು