2:32 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Ex CM | ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನು ಸಮೀಕ್ಷೆ ಮಾಡಿ: ಕೇಂದ್ರ ಸಚಿವರಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ

16/03/2025, 19:56

ಹಾವೇರಿ(reporterkarnataka.com): ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿಯನ್ನಾಗಿ ಮಾಡಲು ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನಿನ ಸರ್ವೆನಂಬ‌ರ್ ಆಧಾರದಲ್ಲಿ ಸಟಲೈಟ್ ಮೂಲಕ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬವರಾಜ ಬೊಮ್ಮಾಯಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ಫಸಲ್ ಬಿಮಾ ಯೋಜನೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ರೈತ ಪರವಾದ ಯೋಜನೆಯಾಗಿದ್ದು, ಈ ಯೋಜನೆಯನ್ನು ಇನ್ನಷ್ಟು ರೈತ ಪರ ಹಾಗೂ ಪಾರದರ್ಶಕವಾಗಿ ಜಾರಿ ಮಾಡುವುದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಬರ, ಪ್ರವಾಹದಂತಹ ಅನೇಕ ಕಾರಣಗಳಿಂದ ಬೆಳೆ ಹಾನಿಗೊಳಗಾದಾಗ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದೆ. ಅದರ ಬದಲು ಪ್ರತಿ ರೈತರ ಜಮೀನಿನ ಸರ್ವೆ ನಂಬರ್ ಆಧಾರದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದರೆ ನಿಜವಾಗಲೂ ಬೆಳೆಹಾನಿಗೊಳಗಾದ ಎಲ್ಲ ರೈತರೂ ವಿಮಾ ಪರಿಹಾರ ಪಡೆಯಲು ಅನುಕೂಲವಾಗುತ್ತದೆ. ಅಲ್ಲದೇ ಅನಗತ್ಯವಾಗಿ ವಿಮಾ ಪರಿಹಾರ ಪಡೆಯುವುದನ್ನು ತಪ್ಪಿಸಿದಂತಾಗುತ್ತದೆ.
ಇನ್ನೊಂದು ಮಹತ್ವದ ವಿಷಯವೆಂದರೆ ಬೆಳೆ ಹಾನಿಯ ಪ್ರಮಾಣವನ್ನು ಹಿಂದಿನ ಏಳು ವರ್ಷಗಳ ಅಂದಾಜು ಪಡೆಯುವುದರಿಂದ ಸರಿಯಾದ ಹಾನಿಯ ಪ್ರಮಾಣವನ್ನು ತಿಳಿದುಕೊಳ್ಳಲು ಸಾಧ್ಯವಾಗುವುದಿಲ್ಲ. ಮಳೆಯ ಅನಿಶ್ಚಿತತೆ ಹಾಗೂ ಹವಾಮಾನ ವೈಪರಿತ್ಯರಿಂದ ಏಳು ವರ್ಷಗಳ ಅವಧಿಯಲ್ಲಿ ಬೆಳೆ ಹಾನಿಯ ಬಗ್ಗೆ ನಿಖರವಾದ ಮಾಹಿತಿ ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಬೆಳೆ ಹಾನಿಯ ಬಗ್ಗೆ ಪ್ರಸ್ತುತ ಹಂಗಾಮು ವರ್ಷ ಹಾಗೂ ಹಿಂದಿನ ವರ್ಷ ಸೇರಿ ಎರಡು ವರ್ಷಗಳನ್ನು ಪರಿಗಣಿಸಬೇಕು. ಈ ಎರಡೂ ಸುಧಾರಣೆಗಳನ್ನು ಜಾರಿಗೆ ತರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ಅಲ್ಲದೇ ಈಗಾಗಲೇ ಪ್ರೀಮಿಯಂ ಮೊತ್ತ ನಿಗದಿಯಾಗಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಯಾವುದೇ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ.
ಈ ಎರಡು ಸುಧಾರಣೆಗಳನ್ನು ತಂದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ನಿಮ್ಮ ಉದ್ದೇಶದಂತೆ ಫಸಲ್ ಬಿಮಾ ಯೋಜನೆ ರೈತರ ಆಪದ್ಭಾಂದವ ಆಗಲಿದೆ. ದಯವಿಟ್ಟು ಈ ವಿಷಯದಲ್ಲಿ ತಾವು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ತಮ್ಮ ಅಧ್ಯಕ್ಷತೆಯಲ್ಲಿ ಈ ವಿಷಯದ ಕುರಿತು ಚರ್ಚಿಸಲು ನಾನು ಆಸಕ್ತನಿದ್ದೇನೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು