12:39 PM Friday9 - January 2026
ಬ್ರೇಕಿಂಗ್ ನ್ಯೂಸ್
ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿ ಜತೆ ಹಾಲಿ ಸಿಎಂ ಸಿದ್ದರಾಮಯ್ಯರೂ ದತ್ತಪೀಠಕ್ಕೆ ಬರಲಿ: ಸಿ.ಟಿ. ರವಿ

21/11/2023, 17:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ದತ್ತಪೀಠಕ್ಕೆ ಬರಲಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಮನವಿ ಮಾಡಿದ್ದಾರೆ.


ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆಯು ಸಿಎಂ ಸಿದ್ದರಾಮಯ್ಯನವರಿಗೂ ಮಾದರಿ. ಅವರು ಕೂಡ ದತ್ತಪೀಠಕ್ಕೆ ಬರಲಿ.
ನಾನು ಹಿಂದೂ ಅಲ್ವಾ, ನನ್ನ ಹೆಸರಲ್ಲೇ ರಾಮ ಇದ್ದಾನೆ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ನೀವು ಮಾಲೆ ಹಾಕಿಕೊಂಡು ಬಂದರೆ ನಮ್ಮ ಸತ್ಯದ ಹೋರಾಟಕ್ಕೆ ಬಲ ಬರಲಿದೆ ಎಂದು ಮಾಧ್ಯಮ ಜತೆ ಮಾತನಾಡಿದ ರವಿ ನುಡಿದರು.
ಹಿಂದು ಎಂದು ಹೇಳಿಕೊಳ್ಳಲು ಗರ್ವ ಪಡಬೇಕು. ಸಮಾಜ ಇದನ್ನೇ ಕೇಳೋದು. ನೀವು ಮಾಲೆ ಹಾಕಿದರೆ ಸಚಿವ ಜಮೀರ್ ಅವರು ಕೂಡ ಮಾಲೆ ಹಾಕೇ ಹಾಕುತ್ತಾರೆ. ಆಗ 5 ದಶಕದ ಹೋರಾಟಕ್ಕೆ ಬಲ ಬರುತ್ತೆ, ಸತ್ಯವನ್ನ ಎತ್ತಿ ಹಿಡಿದಂತಾಗುತ್ತೆ. ನಮ್ಮ ಧರ್ಮದ ಪ್ರಕಾರ ನಡೆದುಕೊಳ್ಳಲು ಯಾರಿಗೆ ಏಕೆ ಹೆದರಬೇಕು ಎಂದು ಅವರು ಪ್ರಶ್ನಿಸಿದರು.
ಯಾರೂ ಎಲೆಕ್ಷನ್ ಟೈಂ ನಲ್ಲಿ ಮಾತ್ರ ಹಿಂದೂಗಳಾಗಬಾರದು. ಜೀವನ ಪರ್ಯಂತ ಹಿಂದೂಗಳಾಬೇಕು. ಹಿಂದುತ್ವದ ವಿಚಾರ ಬಂದಾಗ ಹಿಂದೆ ನೋಡಲೇಬಾರದು ಮುಂದಕ್ಕೆ ನೋಡಬೇಕು ಎಂದು ಸಿ.ಟಿ. ರವಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು