6:08 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿ ಜತೆ ಹಾಲಿ ಸಿಎಂ ಸಿದ್ದರಾಮಯ್ಯರೂ ದತ್ತಪೀಠಕ್ಕೆ ಬರಲಿ: ಸಿ.ಟಿ. ರವಿ

21/11/2023, 17:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ದತ್ತಪೀಠಕ್ಕೆ ಬರಲಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಮನವಿ ಮಾಡಿದ್ದಾರೆ.


ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆಯು ಸಿಎಂ ಸಿದ್ದರಾಮಯ್ಯನವರಿಗೂ ಮಾದರಿ. ಅವರು ಕೂಡ ದತ್ತಪೀಠಕ್ಕೆ ಬರಲಿ.
ನಾನು ಹಿಂದೂ ಅಲ್ವಾ, ನನ್ನ ಹೆಸರಲ್ಲೇ ರಾಮ ಇದ್ದಾನೆ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ನೀವು ಮಾಲೆ ಹಾಕಿಕೊಂಡು ಬಂದರೆ ನಮ್ಮ ಸತ್ಯದ ಹೋರಾಟಕ್ಕೆ ಬಲ ಬರಲಿದೆ ಎಂದು ಮಾಧ್ಯಮ ಜತೆ ಮಾತನಾಡಿದ ರವಿ ನುಡಿದರು.
ಹಿಂದು ಎಂದು ಹೇಳಿಕೊಳ್ಳಲು ಗರ್ವ ಪಡಬೇಕು. ಸಮಾಜ ಇದನ್ನೇ ಕೇಳೋದು. ನೀವು ಮಾಲೆ ಹಾಕಿದರೆ ಸಚಿವ ಜಮೀರ್ ಅವರು ಕೂಡ ಮಾಲೆ ಹಾಕೇ ಹಾಕುತ್ತಾರೆ. ಆಗ 5 ದಶಕದ ಹೋರಾಟಕ್ಕೆ ಬಲ ಬರುತ್ತೆ, ಸತ್ಯವನ್ನ ಎತ್ತಿ ಹಿಡಿದಂತಾಗುತ್ತೆ. ನಮ್ಮ ಧರ್ಮದ ಪ್ರಕಾರ ನಡೆದುಕೊಳ್ಳಲು ಯಾರಿಗೆ ಏಕೆ ಹೆದರಬೇಕು ಎಂದು ಅವರು ಪ್ರಶ್ನಿಸಿದರು.
ಯಾರೂ ಎಲೆಕ್ಷನ್ ಟೈಂ ನಲ್ಲಿ ಮಾತ್ರ ಹಿಂದೂಗಳಾಗಬಾರದು. ಜೀವನ ಪರ್ಯಂತ ಹಿಂದೂಗಳಾಬೇಕು. ಹಿಂದುತ್ವದ ವಿಚಾರ ಬಂದಾಗ ಹಿಂದೆ ನೋಡಲೇಬಾರದು ಮುಂದಕ್ಕೆ ನೋಡಬೇಕು ಎಂದು ಸಿ.ಟಿ. ರವಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು